September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾಹಿತಿ ಕಾರ್ಯಾಗಾರ

ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಕುರಿತು ಅಂಗಡಿ/ ಹೋಟೆಲ್/ ವ್ಯಾಪಾರಸ್ಥರು/ ಸಂಘ ಸಂಸ್ಥೆಗಳಿಗೆ ಮತ್ತು ಶ್ರೀ ಕ್ಷೇತ್ರದ ಅಧಿಕಾರಿ/ ನೌಕರರಿಗೆ ಮಾಹಿತಿ ಕಾರ್ಯಗಾರ ಸೆ.27 ರಂದು ನಡೆಯಿತು.

ಕಾರ್ಯಗಾರದಲ್ಲಿ ಗ್ರಾಮ ಪಂಚಾಯಿತಿನ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಎಲ್ಲಾ ಅಂಗಡಿ ಹೋಟೆಲ್ ಮಾಲಕರು ಶ್ರೀ ಕ್ಷೇತ್ರದ ನೌಕರರ ವರ್ಗ ಸಂಘ ಸಂಸ್ಥೆಗಳು ಉಪಸ್ಥಿತರಿದ್ದರು. ಕಾರ್ಯಾಗಾರವನ್ನು ಕುಸುಮಾಧರ ಕಾರ್ಯನಿರ್ವಹಣಾಧಿಕಾರಿಯವರು ತಾಲೂಕು ಪಂಚಾಯಿತಿ ಬೆಳ್ತಂಗಡಿ ಇವರು ಚಾಲನೆ ನೀಡಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಮಹತ್ವ ಮತ್ತು ಸ್ವಚ್ಛತೆಯ ಬಗ್ಗೆ ತಿಳಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ನಾಗರಾಜ್ ಆರ್ ಅಂಚನ್ ಹಸಿರು ದಳ ಮಂಗಳೂರು , ಡೊoಬಯ್ಯ ಜಿಲ್ಲಾ ಸಂಯೋಜಕರು ಸ್ವಚ್ಛ ಭಾರತ ಮಿಷನ್ ದ. ಕ ಜಿ. ಪ ಮಂಗಳೂರು ಇವರು ಭಾಗವಹಿಸಿದರು . ಪ್ರಶ್ನೋತ್ತರ ಕಾರ್ಯಕ್ರಮ ಏಕಬಳಕೆಯ ಪ್ಲಾಸ್ಟಿಕ್ ನ ಬಗ್ಗೆ ಪರ್ಯಾಯ ಮಾರ್ಗೋಪಾಯವನ್ನು ತಿಳಿಸಿದರು. ಅಕ್ಟೋಬರ್ 2 ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮವನ್ನಾಗಿ ಘೋಷಣೆ ಮಾಡುವ ಬಗ್ಗೆ ತೀರ್ಮಾನಿಸಲಾಯಿತು.

Related posts

ಬೆಳ್ತಂಗಡಿ ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಸಂಸ್ಥೆಯಲ್ಲಿ ಆಟಿದ ರಂಗ್ ಕಾರ್ಯಕ್ರಮ

Suddi Udaya

ಹೊಸಂಗಡಿ ಗ್ರಾ.ಪಂ. ನ ನೇತೃತ್ವದಲ್ಲಿ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಕುಕ್ಕೆ ಲಿಂಗ ವಂಶಸ್ಥರಾದ ಮಲೆಕುಡಿಯ ಜನಾಂಗದವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಶಾಶ್ವತ ಮೂಲನಿವಾಸಿ ಸ್ಥಾನಮಾನ ನೀಡುವಂತೆ ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಶ್ರೀ ದೇವರ ಪ್ರತಿಷ್ಠೆ

Suddi Udaya

ಉಜಿರೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಆ.30: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya
error: Content is protected !!