July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ತಾಲೂಕು ದಸರಾ ಕ್ರೀಡಾಕೂಟ: ಭಾರತ ಕ್ರೀಡೆಯಲ್ಲೂ ಬಲಿಷ್ಠ ರಾಷ್ಟ್ರವಾಗಿ ಮೂಡಿ ಬರುತ್ತಿದೆ: ಡಾ. ಸತೀಶ್ಚಂದ್ರ

ಬೆಳ್ತಂಗಡಿ: ದಕ ಜಿಲ್ಲಾಡಳಿತ, ದಕಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಪಂ ಬೆಳ್ತಂಗಡಿ, ಗ್ರಾಪಂ ಉಜಿರೆ, ಶಾಲಾ ಶಿಕ್ಷಣ ಇಲಾಖೆ,ಎಸ್ ಡಿಎಂ ಸ್ವಾಯತ್ತ ಕಾಲೇಜು ಉಜಿರೆ, ಯುವಜನ ಒಕ್ಕೂಟ,ಯಂಗ್ ಚಾಲೆಂಜರ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕು ದಸರಾ ಕ್ರೀಡಾಕೂಟವು ಉಜಿರೆಯ ಎಸ್ ಡಿಎಂ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಸೆ.28 ರಂದು ಜರಗಿತು.


ಕ್ರೀಡಾಕೂಟವನ್ನು ಎಸ್ ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್. ಉದ್ಘಾಟಿಸಿ ಮಾತನಾಡಿ “ಇತ್ತೀಚಿನ ವರ್ಷಗಳಲ್ಲಿ ಒಲಂಪಿಕ್ಸ್ ಸೇರಿದಂತೆ ವಿಶ್ವದ ಕ್ರೀಡಾಕೂಟಗಳಲ್ಲಿ ಭಾರತವು ಮುಂಚೂಣಿಯಲ್ಲಿರುವುದು ಹೆಮ್ಮೆಯ ವಿಚಾರ. ಭಾರತವು ಸಾಮಾಜಿಕವಾಗಿ ಆರ್ಥಿಕ ವಾಗಿ ಪ್ರಬಲ ರಾಷ್ಟ್ರ ಎಂದು ಗುರುತಿಸಲ್ಪಟ್ಟಿದ್ದು ಕ್ರೀಡೆಯಲ್ಲೂ ಬಲಿಷ್ಠ ರಾಷ್ಟ್ರವಾಗಿ ಮೂಡಿ ಬರುತ್ತಿದೆ ಎಂದರು.


ಉಜಿರೆ ಗ್ರಾಪಂ ಅಧ್ಯಕ್ಷೆ ಉಷಾ ಕಿರಣ ಕಾರಂತ್ ಅಧ್ಯಕ್ಷತೆ ವಹಿಸಿ ಮಾತನಾಡಿ “ಇಂದಿನ ದಿನಗಳಲ್ಲಿ ಕ್ರೀಡಾ ಕ್ಷೇತ್ರಕ್ಕೂ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿರುವುದು ಶ್ಲಾಘನೀಯ ಯುವಜನರ ಸಾಧನೆ, ಪ್ರತಿಭಾ ಪ್ರೋತ್ಸಾಹಕ್ಕೆ ಕ್ರೀಡಾಕೂಟಗಳು ಸಹಕಾರಿಯಾಗುತ್ತವೆ. ಅವಕಾಶಗಳನ್ನು ಬಳಸಿಕೊಂಡು ಮುನ್ನಡೆದರೆ ಯಶಸ್ಸು ಸಾಧ್ಯ” ಎಂದರು.


ತಾಲೂಕು ದೈಹಿಕ ಶಿಕ್ಷಣ ಪರಿವಿಕ್ಷಣಾಧಿಕಾರಿ ಸುಜಯಾ,ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ ಬಿ., ಎಸ್.ಡಿ.ಎಂನ ಕ್ರೀಡಾ ಕಾರ್ಯದರ್ಶಿ ರಮೇಶ್, ರವಿ ವೈ.ನಾಯಕ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣಾನಂದ ರಾವ್,ತಾಲೂಕು ಯುವಜನ ಒಕ್ಕೂಟದ ನಿರ್ದೇಶಕ ಚಿದಾನಂದ ಇಡ್ಯಾ, ತಾಲೂಕು ನೌಕರರ ಸಂಘದ ಅಧ್ಯಕ್ಷ ಜಯರಾಜ್ ಜೈನ್ ಉಪಸ್ಥಿತರಿದ್ದರು.


ಯಂಗ್ ಚಾಲೆಂಜರ್ಸ್ ಸ್ಪೋರ್ಟ್ಸ್ ಕ್ಲಬ್ ಸಂಚಾಲಕ ನಾಮದೇವ್ ರಾವ್ ನಿರೂಪಿಸಿದರು. ಸಂಯೋಜಕ ಸಾಂತಪ್ಪ ಕಲ್ಮಂಜ ಸ್ವಾಗತಿಸಿದರು. ಶಿಕ್ಷಕ ಶೀನಪ್ಪ ಗೌಡ ವಂದಿಸಿದರು.

Related posts

ಶಿಬಾಜೆ: ಕಟ್ಟಿಗೆ ತರಲೆಂದು ಹೋದವರು ಮನೆಗೆ ಹಿಂತಿರುಗಿ ಬಾರದೆ ನಾಪತ್ತೆ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ಶಿಕ್ಷಕ ಯುವರಾಜ್ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಡಿರುದ್ಯಾವರ: ಪಣಿಕಲ್ಲು ಎಂಬಲ್ಲಿ ತೋಟಕ್ಕೆ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿದ ಮಚ್ಚಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೇಜಾವರ ಶ್ರೀಧರ್ ಭಟ್ ರವರಿಂದ ಪ್ರೋತ್ಸಾಹಧನ ವಿತರಣೆ

Suddi Udaya

ಸಾಮರಸ್ಯ ಸಾರಿದ ಮಂಗಳೂರು ದಸರಾ ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಹರ್ಷ

Suddi Udaya

ಗಾಳಿ ಮಳೆಯಿಂದ ಹಾನಿಗೊಳಗಾದ ತೆಕ್ಕಾರು ಬೇಬಿ ಪೂಜಾರ್ತಿರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ವೈಯಕ್ತಿಕ ಸಹಾಯ

Suddi Udaya
error: Content is protected !!