September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾಹಿತಿ ಕಾರ್ಯಾಗಾರ

ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಕುರಿತು ಅಂಗಡಿ/ ಹೋಟೆಲ್/ ವ್ಯಾಪಾರಸ್ಥರು/ ಸಂಘ ಸಂಸ್ಥೆಗಳಿಗೆ ಮತ್ತು ಶ್ರೀ ಕ್ಷೇತ್ರದ ಅಧಿಕಾರಿ/ ನೌಕರರಿಗೆ ಮಾಹಿತಿ ಕಾರ್ಯಗಾರ ಸೆ.27 ರಂದು ನಡೆಯಿತು.

ಕಾರ್ಯಗಾರದಲ್ಲಿ ಗ್ರಾಮ ಪಂಚಾಯಿತಿನ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಎಲ್ಲಾ ಅಂಗಡಿ ಹೋಟೆಲ್ ಮಾಲಕರು ಶ್ರೀ ಕ್ಷೇತ್ರದ ನೌಕರರ ವರ್ಗ ಸಂಘ ಸಂಸ್ಥೆಗಳು ಉಪಸ್ಥಿತರಿದ್ದರು. ಕಾರ್ಯಾಗಾರವನ್ನು ಕುಸುಮಾಧರ ಕಾರ್ಯನಿರ್ವಹಣಾಧಿಕಾರಿಯವರು ತಾಲೂಕು ಪಂಚಾಯಿತಿ ಬೆಳ್ತಂಗಡಿ ಇವರು ಚಾಲನೆ ನೀಡಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಮಹತ್ವ ಮತ್ತು ಸ್ವಚ್ಛತೆಯ ಬಗ್ಗೆ ತಿಳಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ನಾಗರಾಜ್ ಆರ್ ಅಂಚನ್ ಹಸಿರು ದಳ ಮಂಗಳೂರು , ಡೊoಬಯ್ಯ ಜಿಲ್ಲಾ ಸಂಯೋಜಕರು ಸ್ವಚ್ಛ ಭಾರತ ಮಿಷನ್ ದ. ಕ ಜಿ. ಪ ಮಂಗಳೂರು ಇವರು ಭಾಗವಹಿಸಿದರು . ಪ್ರಶ್ನೋತ್ತರ ಕಾರ್ಯಕ್ರಮ ಏಕಬಳಕೆಯ ಪ್ಲಾಸ್ಟಿಕ್ ನ ಬಗ್ಗೆ ಪರ್ಯಾಯ ಮಾರ್ಗೋಪಾಯವನ್ನು ತಿಳಿಸಿದರು. ಅಕ್ಟೋಬರ್ 2 ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮವನ್ನಾಗಿ ಘೋಷಣೆ ಮಾಡುವ ಬಗ್ಗೆ ತೀರ್ಮಾನಿಸಲಾಯಿತು.

Related posts

ಉಜಿರೆ ನಿನ್ನಿಕಲ್ಲು 33/11 ಕೆ.ವಿ ವಿದ್ಯುತ್ ಉಪಕೇಂದ್ರದ ಕಾಮಗಾರಿ ಶೀಘ್ರ ಆರಂಭ: ನಿನ್ನಿಕಲ್ಲಿನಲ್ಲಿ 0.96 ಎಕ್ರೆ ಜಾಗ ಮಂಜೂರು: ರೂ. 46.66 ಲಕ್ಷ ಸ್ಥಳ ಮೌಲ್ಯ ಪಾವತಿಗೆ ಸೂಚನೆ

Suddi Udaya

ಚಾರ್ಮಾಡಿ: ಅರಣ್ಯ ಇಲಾಖೆಯಿಂದಸತ್ತ ಆನೆಯ ದಫನ: ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ಬೆಳ್ತಂಗಡಿ : ಆಂಬುಲೆನ್ಸ್ ನಲ್ಲಿ ಗೆಳೆಯರ ಜೊತೆ ಟ್ರಿಪ್: ಬೆಳ್ತಂಗಡಿ ಸಂಚಾರ ಪೊಲೀಸರಿಂದ ಬಿತ್ತು ಚಾಲಕನಿಗೆ ದಂಡ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಜೆಜೆಸಿ ತ್ರಿಷಾರವರಿಗೆ ಗೌರವರ್ಪಣೆ

Suddi Udaya

ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

Suddi Udaya
error: Content is protected !!