26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಸಿದ್ಧಾಂತಕೀರ್ತಿ ಸ್ವಾಮೀಜಿಯವರಿಂದ ಉದ್ಘಾಟನೆ: ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಹೆಗ್ಗಡೆ, ಮಣಿಲಶ್ರೀ ಉಪಸ್ಥಿತಿ: 115 ಭಜನಾ ಮಂಡಳಿಗಳ 202 ಮಂದಿ ಶಿಬಿರಾಥಿ೯ಗಳು ಭಾಗಿ

ಧರ್ಮಸ್ಥಳ: ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ ಸೆ.28 ರಿಂದ ಪ್ರಾರಂಭಗೊಂಡು ಅಕ್ಟೋಬರ್ 4 ರವರೆಗೆ ನಡೆಯಲಿದೆ.

ಇಂದು ಮಹೋತ್ಸವ ಸಭಾಭವನದಲ್ಲಿ ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟವನ್ನು ಉದ್ಘಾಟಿಸುವ ಮೂಲಕ ಭಜನಾ ತರಬೇತಿ ಕಮ್ಮಟಕ್ಕೆ ಚಾಲನೆಯನ್ನು ನೀಡಿದರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದರು. ಮಾಣಿಲದ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡಿದರು.


ಹೇಮಾವತಿ ವೀ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಶುಭಾಶಂಸನೆ ಮಾಡಿದರು.
ಸುಪ್ರೀತಾ ಮತ್ತು ವಚ೯ಸ್ಸು ಇವರ ಪ್ರಾಥ೯ನೆ ಹಾಗೂ ವಿದುಷಿ ಚೈತ್ರ ಧಮ೯ಸ್ಥಳ ಮತ್ತು ತಂಡದವರ ನೃತ್ಯ ರೂಪಕದ ಪ್ರಾಥ೯ನೆ ಬಳಿಕ ಭಜನಾ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು. ಕಾಯ೯ದಶಿ೯ ಸುರೇಶ್ ಮೊಯ್ಲಿ ವರದಿ ವಾಚಿಸಿದರು. ಯೋಜನಾಧಿಕಾರಿ ಶ್ರೀನಿವಾಸ್ ಕಾಯ೯ಕ್ರಮ ನಿರೂಪಿಸಿದರು. ಭಜನಾ ಪರಿಷತ್ ಕಾಯ೯ದಶಿ೯ ಪುರುಷೋತ್ತಮ ಪಿ.ಕೆ ವಂದಿಸಿದರು. ಡಾ. ಐ. ಶಶಿಕಾಂತ್ ಜೈನ್ ಸ್ವಸ್ತಿ ಮಂತ್ರ ಪಠಿಸಿದರು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಖ್ಯಾತ ಗಾಯಕರಾದ ಬೆಂಗಳೂರಿನ ಶಂಕರ್ ಶ್ಯಾನ್‌ಬಾಗ್ ಮತ್ತು ಎಂ.ಎಸ್. ಗಿರಿಧರ್, ಕಾಸರಗೋಡಿನ ರಾಮಕೃಷ್ಣ ಕಾಟುಕುಕ್ಕೆ, ಮಣಿಪಾಲದ ಉಷಾ ಹೆಬ್ಬಾರ್, ಉಡುಪಿಯ ಸಂಗೀತಾ ಬಾಲಚಂದ್ರ, ಧರ್ಮಸ್ಥಳದ ಮನೋರಮಾ ತೋಳ್ಪಾಡಿತ್ತಾಯ, ಸುನಿಲ್ ಶೆಟ್ಟಿ, ಸೌಮ್ಯ ಸುಭಾಷ್, ಮಂಗಲದಾಸ ಗುಲ್ವಾಡಿ, ಎಂ. ನಾಗೇಶ್ ಶೆಣೈ, ರವಿರಾಜ್ ಉಜಿರೆ, ರಮೇಶ್ ಕಲ್ಮಾಡಿ, ಶಂಕರ್ ಉಡುಪಿ, ಕುಮಾರಿ ಚೈತ್ರಾ ಮತ್ತು ಕುಮಾರಿ ಮಾಧವಿ, ಎಂ.ಎಸ್. ಹಾಗೂ ಡಾ. ಶಶಿಕಾಂತ್ ಜೈನ್ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ, ಮಾರ್ಗದರ್ಶನ ನೀಡುವರು.

ಭಜನಾ ತರಬೇತಿ ಕಮ್ಮಟದ ಸಂದರ್ಭ ಪ್ರತಿದಿನ ಸಂಜೆ ಗಂಟೆ 5.30 ರಿಂದ ಶಿಬಿರಾರ್ಥಿಗಳಿಂದ ನಗರ ಭಜನೆ ಕಾರ್ಯಕ್ರಮವಿದೆ.
ಪ್ರತಿದಿನ ರಾತ್ರಿ ಗಂಟೆ 7.30 ರಿಂದ ಸಾಂಸ್ಕತ್ರಿಕ ಕಾರ್ಯಕ್ರಮಗಳು ನಡೆಯಲಿದೆ.

Related posts

ಪಡಂಗಡಿ: ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸಾಮೂಹಿಕ ಶನಿ ಪೂಜೆ

Suddi Udaya

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಭಾರತೀಯ ಮಜ್ದೂರ್ ಸಂಘದಿಂದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಹಿರಿಯ ಅಧಿಕಾರಿಯವರಿಗೆ ಮನವಿ

Suddi Udaya

ಕರಾಟೆ ಚಾಂಪಿಯನ್ ಶಿಪ್ : ಬೆಳ್ತಂಗಡಿಯ ಶ್ರೇಯಸ್ ಕುಮಿಟೆಯಲ್ಲಿ ಪ್ರಥಮ ಸ್ಥಾನ

Suddi Udaya

ಚಾರ್ಮಾಡಿ ಸ. ಉ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಎಂಸಿಎಫ್ ನ ಸಿ ಎಸ್ ಆರ್ ಆಕ್ಟಿವಿಟಿ ಯೋಜನೆ ಅಡಿಯಲ್ಲಿ ಪೆರಿಂಜೆ ಸ.ಹಿ.ಪ್ರಾ. ಶಾಲೆಯಲ್ಲಿ ನಿರ್ಮಿಸಲಾದ ನೂತನ ಶೌಚಾಲಯದ ಉದ್ಘಾಟನೆ

Suddi Udaya
error: Content is protected !!