25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕಾವು ಸ.ಹಿ.ಪ್ರಾ. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಲೀಲಾ ರವರಿಗೆ ಅಭಿನಂದನಾ ಸಮಾರಂಭ

ಕುಕ್ಕಾವು ಸ.ಹಿ.ಪ್ರಾ. ಶಾಲೆಯಲ್ಲಿ 6 ವರ್ಷ 9 ತಿಂಗಳ ಕಾಲ ಸೇವೆ ಸಲ್ಲಿಸಿ ಪ್ರಸುತ್ತ ಸ.ಉ.ಹಿ.ಪ್ರಾ. ಶಾಲೆ ಬಜಿರೆಗೆ ವರ್ಗಾವಣೆಯಾದ ಶಿಕ್ಷಕಿ ಶ್ರೀಮತಿ ಲೀಲಾ ಬಿ. ಇವರನ್ನು ಶಾಲೆಯ ಮುಖ್ಯ ಶಿಕ್ಷಕಿ, ಸಹ ಶಿಕ್ಷಕಿ , ಅಂಗಡಿ ಸಿಬ್ಬಂದಿಗಳು ಎಸ್.ಡಿ.ಎಂ.ಸಿ ಪೋಷಕರು ಹಾಗೂ ಊರವರ ಪರವಾಗಿ ಅಭಿನಂದನಾ ಸಮಾರಂಭವು ನಡೆಯಿತು.

ಸಭಾಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷೆ ಬೇಬಿ ವಹಿಸಿದರು. ಮುಖ್ಯ ಅತಿಥಿಗಳಾಗಿ ಶಿವಾನಂದ ರಾವ್ ಕಕ್ಕೆನೇಜಿ, ನೋಣಯ್ಯ ಪೂಜಾರಿ, ಗ್ರಾ.ಪಂ. ಸದಸ್ಯ ರಾಮಣ್ಣ ಕುಂಬಾರ, ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಶಾಂತ್ ಪೂಜಾರಿ, ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಜಯಶ್ರೀ, ಮುಖ್ಯ ಶಿಕ್ಷಕ ನಾಗಪ್ಪ ಡಿ. ಉಪಸ್ಥಿತರಿದ್ದರು.

ಪೋಷಕರಾದ ಶ್ರೀಮತಿ ವೀಣಾ, ವಸಂತಲಕ್ಷ್ಮೀ, ಪೂರ್ಣಿಮಾ, ಬಶೀರ್, ಜಯಶ್ರೀ, ಹಾಗೂ ವಿದ್ಯಾರ್ಥಿಗಳಾದ ಸಾನಿಧ್ಯ, ಶ್ರಾವಣಿ, ಧನುಷ್, ಅನಿತಾ, ಅಭಿಜ್ಞಾ, ಶೀತಲ್, ಇವರುಗಳು ಅನಿಸಿಕೆ ವ್ಯಕ್ತಪಡಿಸಿದರು.

ಸಹಶಿಕ್ಷಕಿ ಸುಮಂಗಲಾ ಸನ್ಮಾನ ಪತ್ರ ವಾಚಿಸಿದರು. ದೇವಿದಾಸ್ ಧನ್ಯವಾದವಿತ್ತರು. ನೇತ್ರಾವತಿ ನಿರೂಪಿಸಿದರು.

Related posts

ಶ್ರೀಕರ ಭಟ್ ಮತ್ತು ಡಾ. ಪಾದೆಕಲ್ಲು ವಿಷ್ಣು ಭಟ್ ರವರಿಗೆ  ಉಡುಪಿಯ ಯಕ್ಷಗಾನ ಕಲಾರಂಗ ಪ್ರಶಸ್ತಿ

Suddi Udaya

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಕೊಕ್ಕಡ ಟೀಂ ಸುಹಾಸ್ ಶೆಟ್ಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ ಅಂಗನವಾಡಿಗೆ ಲಯನ್ಸ್ ಕ್ಲಬ್ ನಿಂದ ಚಾಪೆ ಕೊಡುಗೆ

Suddi Udaya

ನ.25: ಡಾ. ಡಿ ವೀರೇಂದ್ರ ಹೆಗ್ಗಡೆಯವರ 76 ನೇ ಜನ್ಮ ದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

Suddi Udaya
error: Content is protected !!