23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ನನ್ನ ಗಿಡ ನನ್ನ ಮರ’ ಮತ್ತು ‘ನನ್ನ ನೆಲ ನನ್ನ ಜಲ’ ವಿನೂತನ ಸಪ್ತಾಹ

ಹೊಸಂಗಡಿ: ಗ್ರಾಮ ಪಂಚಾಯತ್ ಹೊಸಂಗಡಿ, ಅರಣ್ಯ ಇಲಾಖೆ ವೇಣೂರು, ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಟಾನ ಹೊಸಂಗಡಿ, ರೋಟರಿ ಕ್ಲಬ್ ಸಿದ್ಧಕಟ್ಟೆ ಫಲ್ಗುಣಿ, ಇನ್ನರ್ ವೀಲ್ ಕ್ಲಬ್ ಮೂಡಬಿದ್ರೆ, ಫ್ರೆಂಡ್ಸ್ ಕ್ಲಬ್ ಹೊಸಂಗಡಿ, ಆಳ್ವಾಸ್ ಸಮಾಜ ಕಾರ್ಯ ಕಾಲೇಜು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲೆಗಳು, ಅಂಗನವಾಡಿಗಳ ಮತ್ತು ಸಂಘ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ನೆಲ ಜಲ ಸಂರಕ್ಷಣೆಗಾಗಿ ನನ್ನ ಗಿಡ ನನ್ನ ಮರ ಮತ್ತು ನನ್ನ ನೆಲ ನನ್ನ ಜಲ ಎಂಬ ವಿನೂತನ ಸಪ್ತಾಹ ಕಾರ್ಯಕ್ರಮಕ್ಕೆ ಸೆ 26 ರಂದು ಚಾಲನೆ ನೀಡಲಾಯಿತು.


ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಚಾಲನೆ ನೀಡಿ ನೆಲ ಜಲ ಸಂರಕ್ಷಣೆಗೆ ಹೊಸಂಗಡಿ ಪಂಚಾಯತ್ ನ ಕ್ರಮವನ್ನು ಶ್ಲಾಘಿಸಿದರು ಮತ್ತು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಅಂತರ್ಜಲ ವೃದ್ಧಿಗಾಗಿ ಮತ್ತು ಶಾಶ್ವತ ನೀರಾವರಿಗಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ತಿಳಿಸಿದರು. ಯುವಕರು ಸಮಗ್ರ ಕೃಷಿ ಮಾಡುವಂತೆ ಸಲಹೆ ನೀಡಿದರು. ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷರಾದ ಜಗದೀಶ್ ಹೆಗ್ಡೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವೇಣೂರು ವಲಯ ಅರಣ್ಯಾಧಿಕಾರಿಗಳು ಸುಬ್ರಹ್ಮಣ್ಯ ಆಚಾರ್ ಮಾತನಾಡಿ ಹೊಸಂಗಡಿ ಗ್ರಾಮ ಪಂಚಾಯತ್ ನ ಮಾದರಿ ಕಾರ್ಯಕ್ರಮಗಳಿಗೆ ಪೂರ್ಣ ಸಹಕಾರ ನೀಡುವ ಭರವಸೆ ಇತ್ತರು. ರೋಟರಿ ಜಿಲ್ಲೆ 3181 ನ ಸಹಾಯಕ ಗವರ್ನರ್ ರೋ. ರಾಘವೇಂದ್ರ ಭಟ್ ನೀರಿನ ಮಿತಬಳಕೆ ಮತ್ತು ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು.


ಮೂಡಬಿದಿರೆ ಬ್ಯಾಂಕ್ ಆಫ್ ಬರೋಡದ ಮ್ಯಾನೇಜರ್ ಸಂತೋಷ್ ಕುಮಾರ್ ಮಾತನಾಡಿ ನೆಲ ಜಲ ಸಂರಕ್ಷಣೆಯ ಔಚಿತ್ಯದ ಬಗ್ಗೆ ವಿವರಿಸಿದರು.


ಇನ್ನರ್ ವೀಲ್ ಕ್ಲಬ್ ನ ಅಧ್ಯಕ್ಷರಾದ ಸರಿತಾ ಆಶೀರ್ವಾದ್ ರವರು ಸಪ್ತಾಹಕ್ಕೆ ಶುಭ ಹಾರೈಸಿದರು.
ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಶಾಂತಾ, ಪಂಚಾಯತ್ ಸದಸ್ಯರು, ಸಂಘಸಂಸ್ಥೆಗಳ ಪದಾಧಿಕಾರಿಗಳು, ಗ್ರಾಮದ ರೈತರು ಭಾಗವಹಿಸಿದ್ದರು.


ಪಂಚಾಯತ್ ಸದಸ್ಯರಾದ ಕರುಣಾಕರ ಪೂಜಾರಿ ಸ್ವಾಗತಿಸಿದರು. ಸದಸ್ಯರಾದ ಹರಿಪ್ರಸಾದ್ ಸಪ್ತಾಹದ ಉದ್ದೇಶ ಮತ್ತು ಔಚಿತ್ಯದ ಬಗ್ಗೆ ಪ್ರಾಸ್ತಾವಿಕವಾಗಿ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.


ಎಲ್ಲ ರೈತರಿಗೆ ಸಾಂಕೇತಿಕವಾಗಿ ಗಿಡಗಳನ್ನು ವಿತರಿಸಲಾಯಿತು.
ಸೆ.26 ರಿಂದ ಅ. 2 ರವರಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಲೆಗಳು, ಅಂಗನವಾಡಿಗಳ, ಸಾರ್ವಜನಿಕ ಸ್ಥಳಗಳಲ್ಲಿ ನೆಲ ಜಲ ಸಂರಕ್ಷಣೆಗಾಗಿ ಗಿಡಗಳ ಪುನಶ್ಚೇತನ, ಗಿಡ ನೆಡುವುದು, ಅರಿವು ಕಾರ್ಯಕ್ರಮಗಳು, ಮಕ್ಕಳಿಗೆ ಸ್ಪರ್ಧೆಗಳು, ಸ್ವಚ್ಛತಾ ಕಾರ್ಯಕ್ರಮಗಳು, ಯುವಕರಿಗೆ, ಮಹಿಳೆಯರಿಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿವಿಧ ಸಂಘ ಸಂಸ್ಥೆಗಳು ಹಾಗೂ ಜನ ರ ಸಹಭಾಗಿತ್ವದೊಂದಿಗೆ ಕಾರ್ಯಕ್ರಮ ರೂಪಿಸಲಾಗಿದೆ. ಅ. 2 ರಂದು ಗಾಂಧೀ ಜಯಂತಿ ಯಂದು ಪೇರಿ ಯಲ್ಲಿರುವ ಪ್ರೇರಣಾ ಸೌಧದಲ್ಲಿ ನಡೆಯುವ ವಿಶೇಷ ಗ್ರಾಮಸಭೆಯೊಂದಿಗೆ ಸಪ್ತಾಹ ಸಂಪನ್ನಗೊಳ್ಳಲಿದೆ.

Related posts

ಪಟ್ರಮೆ: ಅನಾರು ಶಾಲೆ ಬಳಿ ಚರಂಡಿಗೆ ಬಿದ್ದ ಕೋಳಿ ಸಾಗಾಟದ ಲಾರಿ

Suddi Udaya

ಬಸದಿಗಳಿಗೆ ಅನುದಾನ : ಸವಣಾಲು ಕ್ಷೇತ್ರದ ಬಸದಿಯ ಅಭಿವೃದ್ಧಿಗೆ ರೂ.9 ಲಕ್ಷ, ಪುದುವೆಟ್ಟು ಬಸದಿಗೆ ರೂ.50 ಲಕ್ಷ ಬಿಡುಗಡೆ

Suddi Udaya

ಸೋದೆ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರಿಗೆ ನುಡಿ ನಮನ

Suddi Udaya

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ:ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಬ್ಲಾಕ್ ಕಾಂಗ್ರೆಸ್ ನಿಂದ ಪೊಲೀಸ್ ದೂರು

Suddi Udaya

ಗಾಳಿ ಮಳೆಗೆ ಹಾರಿದ ಗುಡ್ಡೆತೋಟ ಹೊನ್ನಪ್ಪರವರ ಮನೆಯ ಸಿಮಂಟ್ ಶೀಟ್ ಶೌರ್ಯ ಘಟಕದಿಂದ ಶೀಟ್ ಅಳವಡಿಕೆ

Suddi Udaya
error: Content is protected !!