September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿ ತಜ್ಞರ ದಿನಾಚರಣೆ: ಉಜಿರೆ ನಗರದಲ್ಲಿ ಜಾಗೃತಿ ರ‍್ಯಾಲಿ

ಬೆಳ್ತಂಗಡಿ: ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಜೌಷಧಿ ತಜ್ಞರ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ಶ್ರೀಧರ್ ಕೆ. ವಿ ಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ರಸಾಯನಶಾಸ್ತ್ರ ಮತ್ತು ವಿಶ್ವ ಔಷಧ ತಜ್ಞರ ದಿನದ ಮಹತ್ವವನ್ನು ತಿಳಿಯಪಡಿಸಿದರು. ಇನ್ನೋರ್ವ ಅತಿಥಿ ಡಾ| ಪ್ರಶಾಂತ್ ಬಿ. ಕೆ ಪ್ರಾಂಶುಪಾಲರು ಪ್ರಸನ್ನ ಕಾಲೇಜ್ ಆಫ್ ಆಯುರ್ವೇದ ಹಾಗೂ ಹಾಸ್ಪಿಟಲ್ ಇವರು ವಿದ್ಯಾರ್ಥಿಗಳಿಗೆ ಅಂಗಾಂಗ ದಾನದ ಮಹತ್ವವನ್ನು ವಿವರಿಸಿದರು.

ಪ್ರಸನ್ನ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರಾದ ಡಾ| ಎಂ. ಮಲ್ಲಿಕಾರ್ಜುನ್ ಗೌಡ ಫಾರ್ಮಸಿ ಕಲಿತ ವಿದ್ಯಾರ್ಥಿಗಳು ಮುಂದೆ ಸಮಾಜ ಆರೋಗ್ಯ ವಿಭಾಗದಲ್ಲಿ ಯಾವ ಯಾವ ರೀತಿಯಲ್ಲಿ ಸೇವೆ ಸಲ್ಲಿಸಬಹುದು ಎಂಬುದಾಗಿ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ಪ್ರಸನ್ನ ಸಿ.ಬಿ.ಎಸ್.ಇ ರೆಸಿಡೆನ್ಸಿಯಲ್ ಸ್ಕೂಲಿನ ಪ್ರಾಂಶುಪಾಲರಾದ ಕೆ. ಎಸ್.ಎನ್ ಭಟ್ ಉಪಸ್ಥಿತರಿದ್ದರು. ಈ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಅರಿವು ಮೂಡಿಸುವ ಪ್ರಯತ್ನ ಉಜಿರೆಯಲ್ಲಿ ಬೃಹತ್ ರ‍್ಯಾಲಿಯನ್ನು ಹಮ್ಮಿಕೊಂಡಿದ್ದು, ಇದರ ಚಾಲನೆಯನ್ನು ಪ್ರಸನ್ನ ಆಡಳಿತ ಅಧಿಕಾರಿಯಾದ ಕಿರಣ್ ಹೆಬ್ಬಾರ್ ನಡೆಸಿಕೊಟ್ಟರು.

Related posts

ಮಡಂತ್ಯಾರು: ಪಾರೆಂಕಿ ನಿವಾಸಿ ಕೃಷಿಕ ಪಿ ಶಾಂತರಾಮ ಹೃದಯಾಘಾತದಿಂದ ನಿಧನ

Suddi Udaya

ತೆಂಕಕಾರಂದೂರು : ಜನಾರ್ದನ ಆಚಾರ್ಯ ರವರ ಮನೆಯ ಹಿಂಬದಿ ಗುಡ್ಡ ಕುಸಿತ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಇಂದಬೆಟ್ಟು ಸ.ಹಿ.ಪ್ರಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಅಂಡಿಂಜೆ ಒಕ್ಕೂಟದ ವತಿಯಿಂದ ಆರಿ ವರ್ಕ್ ತರಬೇತಿ ಕಾರ್ಯಾಗಾರ

Suddi Udaya

ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರದ ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರ ಆಯ್ಕೆಯನ್ನು ತಡೆ ಹಿಡಿದದ್ದು ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ಜಿಲ್ಲಾ ರೈತ ತರಬೇತಿ ಕೇಂದ್ರ ಹಾಗೂ ಒಕ್ಕೂಟದ ವತಿಯಿಂದ ರೈತ ತರಬೇತಿ ಕಾರ್ಯಕ್ರಮ

Suddi Udaya
error: Content is protected !!