25.4 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆ

ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆಯನ್ನು ಲಾಯಿಲ “ಭಗತ್ ಸಿಂಗ್” ವೃತ್ತದಲ್ಲಿ ಆಚರಿಸಲಾಯಿತು. ಭಗತ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅವರನ್ನು ಸ್ಮರಿಸಲಾಯಿತು.

ಲಾಯಿಲ ಗ್ರಾ.ಪಂ. ಸದಸ್ಯರಾದ ಅರವಿಂದ್ ಸ್ವಾಗತಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೃಷಿ ಯೋಜನಾಧಿಕಾರಿ ರಾಮ್ ಕುಮಾರ್ ಮರ್ನಾಡ್ ಇವರು ಭಗತ್ ಸಿಂಗ್ ಇವರ ಜೀವನ ಚರಿತ್ರೆಯ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ಲಾಯಿಲ ಜಂಕ್ಷನ್ ನಲ್ಲಿ ವೃತ್ತ ನಿರ್ಮಾಣ ಮಾಡಿದ ಹಿರಿಯರನ್ನು ಗೌರವಿಸಿ ಭಗತ್ ಸಿಂಗ್ ಇವರ ಜೀವನವನ್ನು ಆದರ್ಶವಾಗಿ ತೆಗೆದುಕೊಂಡು ನಾವು ಸಾಗಬೇಕು ಎಂದು ಜಗದೀಶ್ ಕನ್ನಾಜೆ ತಿಳಿಸಿದರು.

ಕಾರ್ಯಕ್ರಮದಲ್ಲಿ , ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಇದರ ಗೌರವ ಅಧ್ಯಕ್ಷರಾದ ಪ್ರಕಾಶ್ ಕಾಶಿಬೆಟ್ಟು, ಸಮಿತಿಯ ಸದಸ್ಯರು, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಲಾಯಿಲ ಇದರ ಸದಸ್ಯರು ಲಾಯಿಲ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂದಳ ಘಟಕದ ಕಾರ್ಯಕರ್ತ ಬಂಧುಗಳು, ನಗರ ಪಂಚಾಯತ್ ಸದಸ್ಯರಾದ ಶರತ್ ಕುಮಾರ್ , ಮೋಹನ್ ಭಟ್ ಗುರಿಂಗಾನ ,ಮತ್ತು ಊರಿನ ನಾಗರಿಕರು ಭಾಗವಹಿಸಿದರು.

ಗ್ರಾಮ ಪಂಚಾಯತ್ ನಿಕಟಪೂರ್ವ ಉಪಾಧ್ಯಕ್ಷ ಗಣೇಶ್ ಇವರು ಧನ್ಯವಾದಗೈದರು.

Related posts

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

Suddi Udaya

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಹದಗೆಟ್ಟಿರುವ ಸೋಮಂತಡ್ಕ ಮಜಲು ರಸ್ತೆ : ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸುವಂತೆ ಗ್ರಾಮಸ್ಥರ ಮನವಿ

Suddi Udaya
error: Content is protected !!