26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

ನಾರಾವಿ: “ಮಾದಕ ದ್ರವ್ಯಕ್ಕೆ ದಾಸರಾದವರು ಅವರಿಂದ ಹೊರಬರಲು ಕಷ್ಟಪಡಬೇಕಾಗುತ್ತದೆ.ಮಾದಕ ದ್ರವ್ಯ ಮನುಷ್ಯನಲ್ಲಿ ತಪ್ಪುಗಳನ್ನು ಮಾಡಿಸುತ್ತದೆ.ಮಾದಕ ವಸ್ತುಗಳ ಸೇವನೆಯ ಚಟವನ್ನು ಬಿಟ್ಟು ಮತ್ತೆ ಒಳ್ಳೆಯ ಬದುಕು ಕಟ್ಟಲು ಸಾದ್ಯವಿದೆ” ಎಂದು ಸಮಾಜಸೇವಕರಾದ ಶ್ರೀ ಮಾರ್ಕ್ ಡಿ ಸೋಜ ಮಂಗಳೂರು ಇವರು ಹೇಳಿದರು.


ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಎಸ್.ಸಿ.ಎಸ್ ಆಸ್ಪತ್ರೆ ಮಂಗಳೂರು ಇಲ್ಲಿನ ವೈದ್ಯರಾದ ಡಾ| ಅನಿರುದ್ಧ್ ಇವರು ಮಾದಕ ದ್ರವ್ಯ ಸೇವನೆಯು ಮನುಷ್ಯನ ಮೆದುಳನ್ನು ಯಾವ ರೀತಿಯಾಗಿ ಘಾಸಿಗೊಳಿಸುತ್ತದೆ ಎಂಬುದನ್ನು ತಿಳಿಸಿದರು.ಮದ್ಯದ ವ್ಯಸನಕ್ಕೆ ಬಲಿಯಾಗಿ ಮತ್ತೆ ಅದರಿಂದ ಹೊರಬಂದು ನೆಮ್ಮದಿಯ ಜೀವನ ಸಾಗಿಸುತ್ತಿರುವ ಹಾಗೂ ಸಮಾಜಸೇವಕರಾದ ಎಲಿಯಾಸ್ ಮೊಂತೆರೊ ತಾಕೊಡೆ ಇವರು ತಮ್ಮ ಜೀವನದ ಬಗ್ಗೆ ವಿವರಿಸಿ ಮದ್ಯವ್ಯಸನದಿಂದಾಗುವ ದುಷ್ಪರಿಣಾಮವನ್ನು ಸವಿಸ್ತಾರವಾಗಿ ತಿಳಿಸಿದರು.ಕಾಲೇಜಿನ ಪ್ರಾಚಾರ್ಯರಾದ ವಂ.ಡಾ. ಆಲ್ವಿನ್ ಸೆರಾವೊ ಎಲ್ಲರನ್ನು ಸ್ವಾಗತಿಸಿದರು.

ವೇದಿಕೆಯಲ್ಲಿ ಎನ್. ಎಸ್.ಎಸ್. ಯೋಜನಾಧಿಕಾರಿಗಳಾದ ದಿನೇಶ್ ಬಿ.ಕೆ. ,ಉಪಪ್ರಾಂಶುಪಾಲರಾದ ಸಂತೋಷ್ ಸಲ್ಡಾನ ಉಪಸ್ಥಿತರಿದ್ದರು. ಇತಿಹಾಸ ಉಪನ್ಯಾಸಕರಾದ ರಿಚರ್ಡ್ ಮೋರಸ್ ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ ಯೋಜನೆಯ ಕಾರ್ಯಕ್ರಮ: ರಾಜ್ಯಾದ್ಯಂತ 1000 ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಆಂತರಿಕ ಗುಣಮಟ್ಟದ ಭರವಸೆ ಕೋಶ ವಾಣಿಜ್ಯ ಮತ್ತು ಹೂಡಿಕೆದಾರರ ಜಾಗೃತಿ ಕಾರ್ಯಾಗಾರ

Suddi Udaya

ತ್ರೋಬಾಲ್ ಪಂದ್ಯಾಟ: ಸಂತ ತೆರೇಸಾ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನಕ್ಕೆ ಶ್ರೀ ಕಂಚಿ ಕಾಮಕೋಟಿ ಶ್ರೀಗಳು ಭೇಟಿ

Suddi Udaya

ಉಪ ವಲಯ ಅರಣ್ಯಾಧಿಕಾರಿ ಉಜಿರೆಯ ಕಮಲಾ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆ

Suddi Udaya
error: Content is protected !!