25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

ನಾರಾವಿ: “ಮಾದಕ ದ್ರವ್ಯಕ್ಕೆ ದಾಸರಾದವರು ಅವರಿಂದ ಹೊರಬರಲು ಕಷ್ಟಪಡಬೇಕಾಗುತ್ತದೆ.ಮಾದಕ ದ್ರವ್ಯ ಮನುಷ್ಯನಲ್ಲಿ ತಪ್ಪುಗಳನ್ನು ಮಾಡಿಸುತ್ತದೆ.ಮಾದಕ ವಸ್ತುಗಳ ಸೇವನೆಯ ಚಟವನ್ನು ಬಿಟ್ಟು ಮತ್ತೆ ಒಳ್ಳೆಯ ಬದುಕು ಕಟ್ಟಲು ಸಾದ್ಯವಿದೆ” ಎಂದು ಸಮಾಜಸೇವಕರಾದ ಶ್ರೀ ಮಾರ್ಕ್ ಡಿ ಸೋಜ ಮಂಗಳೂರು ಇವರು ಹೇಳಿದರು.


ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಎಸ್.ಸಿ.ಎಸ್ ಆಸ್ಪತ್ರೆ ಮಂಗಳೂರು ಇಲ್ಲಿನ ವೈದ್ಯರಾದ ಡಾ| ಅನಿರುದ್ಧ್ ಇವರು ಮಾದಕ ದ್ರವ್ಯ ಸೇವನೆಯು ಮನುಷ್ಯನ ಮೆದುಳನ್ನು ಯಾವ ರೀತಿಯಾಗಿ ಘಾಸಿಗೊಳಿಸುತ್ತದೆ ಎಂಬುದನ್ನು ತಿಳಿಸಿದರು.ಮದ್ಯದ ವ್ಯಸನಕ್ಕೆ ಬಲಿಯಾಗಿ ಮತ್ತೆ ಅದರಿಂದ ಹೊರಬಂದು ನೆಮ್ಮದಿಯ ಜೀವನ ಸಾಗಿಸುತ್ತಿರುವ ಹಾಗೂ ಸಮಾಜಸೇವಕರಾದ ಎಲಿಯಾಸ್ ಮೊಂತೆರೊ ತಾಕೊಡೆ ಇವರು ತಮ್ಮ ಜೀವನದ ಬಗ್ಗೆ ವಿವರಿಸಿ ಮದ್ಯವ್ಯಸನದಿಂದಾಗುವ ದುಷ್ಪರಿಣಾಮವನ್ನು ಸವಿಸ್ತಾರವಾಗಿ ತಿಳಿಸಿದರು.ಕಾಲೇಜಿನ ಪ್ರಾಚಾರ್ಯರಾದ ವಂ.ಡಾ. ಆಲ್ವಿನ್ ಸೆರಾವೊ ಎಲ್ಲರನ್ನು ಸ್ವಾಗತಿಸಿದರು.

ವೇದಿಕೆಯಲ್ಲಿ ಎನ್. ಎಸ್.ಎಸ್. ಯೋಜನಾಧಿಕಾರಿಗಳಾದ ದಿನೇಶ್ ಬಿ.ಕೆ. ,ಉಪಪ್ರಾಂಶುಪಾಲರಾದ ಸಂತೋಷ್ ಸಲ್ಡಾನ ಉಪಸ್ಥಿತರಿದ್ದರು. ಇತಿಹಾಸ ಉಪನ್ಯಾಸಕರಾದ ರಿಚರ್ಡ್ ಮೋರಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಅಡಿಕೆಯೊಂದಿಗೆ ಕಾಳುಮೆಣಸು ಮತ್ತು ಜಾಯಿಕಾಯಿ ಬೆಳೆಯುವ ರೈತರಿಗೆ ಸುವರ್ಣವಕಾಶ

Suddi Udaya

ಕೊಕ್ಕಡ: ರಾಮ ಸೇವಾ ಮಂದಿರದ ಪಾಕಶಾಲೆಯ ಕಾಮಗಾರಿಗೆ ರಾಘವೇಂದ್ರ ನಾಯಕ್ ಬರ್ಗುಳ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ದೇವರ ಪ್ರತಿಷ್ಠಾಪನೆ ಹಾಗೂ ಶ್ರೀರಾಮ ಮಂದಿರ ಲೋಕಾರ್ಪಣೆ: ದೀಪಾಲಂಕಾರದ ಮೂಲಕ ಸಂಭ್ರಮಾಚರಣೆಗೆ ಸಜ್ಜಾಗುತ್ತಿರುವ ಮಡಂತ್ಯಾರುವಿನ ಅಂಗಡಿ ಮುಂಗಟ್ಟುಗಳು

Suddi Udaya

ಬೆಳ್ತಂಗಡಿ: ನೇಮಿರಾಜ್ ಬುಣ್ಣು ನಿಧನ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದಿಂದ ಕಿರಣ್ ಚಂದ್ರ ಪುಷ್ಪಗಿರಿ ರವರ ಭೇಟಿ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.22 ಡಿವಿಡೆಂಡ್ ಘೋಷಣೆ

Suddi Udaya
error: Content is protected !!