25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೆ.30: ಬೆಳ್ತಂಗಡಿ ಪಶು ಸಂಗೋಪನಾ ಇಲಾಖೆಯಿಂದ 48 ಗ್ರಾ. ಪಂ. ಪಶುಸಖಿಯವರಿಗೆ ಉಚಿತವಾಗಿ ಕಿಟ್ ವಿತರಣೆ

ಬೆಳ್ತಂಗಡಿ: ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇವರ ವತಿಯಿಂದ ಜಾನುವರಗಳಿಗೆ ನಾಲ್ಕನೇ ಸುತ್ತಿನ ಕಾಲುಬಾಯಿ ಜ್ವರ ತಡೆಗಟ್ಟುವ ಲಸಿಕಾ ಅಭಿಯಾನದ ಚಾಲನೆ, ಪಶು ಸಖಿಯವರಿಗೆ ಇಲಾಖೆಯಿಂದ ಕಿಟ್ ವಿತರಣೆ ಹಾಗೂ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣೆ ಸೆ.30ರಂದು ಶನಿವಾರದಂದು ಬೆಳಿಗ್ಗೆ 10ಗಂಟೆಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಭವನದಲ್ಲಿ ನಡೆಯಲಿದೆ.


ಹರೀಶ್ ಪೂಂಜ ಶಾಸಕರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು , ಕೆ ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್ ವಿಧಾನ ಪರಿಷತ್ ಸದಸ್ಯರು, ಡಾ. ಅರುಣ್ ಕುಮಾರ್ ಶೆಟ್ಟಿ ಉಪನಿರ್ದೇಶಕರು, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧಿಕಾರಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಫಲಾನುಭವಿಗಳಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಹೈನುಗಾರಿಕೆಗೆ ಉಪಯುಕ್ತವಾದ ರಬ್ಬರ್ ಮ್ಯಾಟ್ ವಿತರಣೆ ನಡೆಯಲಿದೆ. ಬೆಳ್ತಂಗಡಿ ತಾಲೂಕಿನ 48 ಗ್ರಾಮ ಪಂಚಾಯಿತಿಯ ಪಶುಸಖಿಯವರಿಗೆ ಪಶು ಪಾಲನ ಇಲಾಖೆಯಿಂದ ಉಚಿತವಾಗಿ ಕಿಟ್ ವಿತರಣೆ ನಡೆಯಲಿದೆ ಎಂದು ಡಾ. ಜಯಕೀರ್ತಿ ಜೈನ್ ತಿಳಿಸಿದ್ದಾರೆ.

Related posts

ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿಗಳ ಪದಾದಿಕಾರಿಗಳ ಸಭೆ

Suddi Udaya

ಹರಿಯಾಣದಲ್ಲಿ ನಡೆಯುವ ಗೋಲ್ಡನ್ ಆರೋ ರ್‍ಯಾಲಿಗೆ ಬೆಳ್ತಂಗಡಿಯ ಸೇವಂತಿ, ದ್ವಿಶಾ ಆಯ್ಕೆ

Suddi Udaya

ನಾರಾವಿ: ಮರಕ್ಕೆ ಡಿಕ್ಕಿ ಹೊಡೆದ ಬೈಕ್ – ಇಬ್ಬರು ಸ್ಥಳದಲ್ಲಿಯೇ ಸಾವು

Suddi Udaya

ತಣ್ಣೀರುಪಂತ: ದೀಪಾವಳಿ ಪ್ರಯುಕ್ತ ದೀಪ ಸಂಜೀವಿನಿ, ಹಳ್ಳಿ ಸಂತೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya

ರೇಷ್ಮೆರೋಡ್: ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya
error: Content is protected !!