26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೆ.30: ಬೆಳ್ತಂಗಡಿ ಪಶು ಸಂಗೋಪನಾ ಇಲಾಖೆಯಿಂದ 48 ಗ್ರಾ. ಪಂ. ಪಶುಸಖಿಯವರಿಗೆ ಉಚಿತವಾಗಿ ಕಿಟ್ ವಿತರಣೆ

ಬೆಳ್ತಂಗಡಿ: ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇವರ ವತಿಯಿಂದ ಜಾನುವರಗಳಿಗೆ ನಾಲ್ಕನೇ ಸುತ್ತಿನ ಕಾಲುಬಾಯಿ ಜ್ವರ ತಡೆಗಟ್ಟುವ ಲಸಿಕಾ ಅಭಿಯಾನದ ಚಾಲನೆ, ಪಶು ಸಖಿಯವರಿಗೆ ಇಲಾಖೆಯಿಂದ ಕಿಟ್ ವಿತರಣೆ ಹಾಗೂ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣೆ ಸೆ.30ರಂದು ಶನಿವಾರದಂದು ಬೆಳಿಗ್ಗೆ 10ಗಂಟೆಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಭವನದಲ್ಲಿ ನಡೆಯಲಿದೆ.


ಹರೀಶ್ ಪೂಂಜ ಶಾಸಕರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು , ಕೆ ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್ ವಿಧಾನ ಪರಿಷತ್ ಸದಸ್ಯರು, ಡಾ. ಅರುಣ್ ಕುಮಾರ್ ಶೆಟ್ಟಿ ಉಪನಿರ್ದೇಶಕರು, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧಿಕಾರಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಫಲಾನುಭವಿಗಳಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಹೈನುಗಾರಿಕೆಗೆ ಉಪಯುಕ್ತವಾದ ರಬ್ಬರ್ ಮ್ಯಾಟ್ ವಿತರಣೆ ನಡೆಯಲಿದೆ. ಬೆಳ್ತಂಗಡಿ ತಾಲೂಕಿನ 48 ಗ್ರಾಮ ಪಂಚಾಯಿತಿಯ ಪಶುಸಖಿಯವರಿಗೆ ಪಶು ಪಾಲನ ಇಲಾಖೆಯಿಂದ ಉಚಿತವಾಗಿ ಕಿಟ್ ವಿತರಣೆ ನಡೆಯಲಿದೆ ಎಂದು ಡಾ. ಜಯಕೀರ್ತಿ ಜೈನ್ ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಸಾಹಿತ್ಯ ಸಮ್ಮೇಳನ: ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ. ರಾ. ಗಣೇಶ್

Suddi Udaya

ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ , ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಶಿಶಿಲದಲ್ಲಿ ನರೇಂದ್ರ ಮೋದಿಯವರ ಪರಿಕಲ್ಪನೆಯಂತೆ ಒಂಬತ್ತು ಜನ ಮಹಿಳೆಯರಿಂದ ಪ್ರಥಮ ಮತದಾನ

Suddi Udaya

ವೇಣೂರು ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಕೊಕ್ಕಡ ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ : ಉಜಿರೆ ಎಸ್.ಡಿ.ಎಂ ಕಾಲೇಜಿಗೆ 6 ಚಿನ್ನದ ಪದಕ

Suddi Udaya
error: Content is protected !!