26.9 C
ಪುತ್ತೂರು, ಬೆಳ್ತಂಗಡಿ
April 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿ ತಜ್ಞರ ದಿನಾಚರಣೆ: ಉಜಿರೆ ನಗರದಲ್ಲಿ ಜಾಗೃತಿ ರ‍್ಯಾಲಿ

ಬೆಳ್ತಂಗಡಿ: ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಜೌಷಧಿ ತಜ್ಞರ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ಶ್ರೀಧರ್ ಕೆ. ವಿ ಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ರಸಾಯನಶಾಸ್ತ್ರ ಮತ್ತು ವಿಶ್ವ ಔಷಧ ತಜ್ಞರ ದಿನದ ಮಹತ್ವವನ್ನು ತಿಳಿಯಪಡಿಸಿದರು. ಇನ್ನೋರ್ವ ಅತಿಥಿ ಡಾ| ಪ್ರಶಾಂತ್ ಬಿ. ಕೆ ಪ್ರಾಂಶುಪಾಲರು ಪ್ರಸನ್ನ ಕಾಲೇಜ್ ಆಫ್ ಆಯುರ್ವೇದ ಹಾಗೂ ಹಾಸ್ಪಿಟಲ್ ಇವರು ವಿದ್ಯಾರ್ಥಿಗಳಿಗೆ ಅಂಗಾಂಗ ದಾನದ ಮಹತ್ವವನ್ನು ವಿವರಿಸಿದರು.

ಪ್ರಸನ್ನ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರಾದ ಡಾ| ಎಂ. ಮಲ್ಲಿಕಾರ್ಜುನ್ ಗೌಡ ಫಾರ್ಮಸಿ ಕಲಿತ ವಿದ್ಯಾರ್ಥಿಗಳು ಮುಂದೆ ಸಮಾಜ ಆರೋಗ್ಯ ವಿಭಾಗದಲ್ಲಿ ಯಾವ ಯಾವ ರೀತಿಯಲ್ಲಿ ಸೇವೆ ಸಲ್ಲಿಸಬಹುದು ಎಂಬುದಾಗಿ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ಪ್ರಸನ್ನ ಸಿ.ಬಿ.ಎಸ್.ಇ ರೆಸಿಡೆನ್ಸಿಯಲ್ ಸ್ಕೂಲಿನ ಪ್ರಾಂಶುಪಾಲರಾದ ಕೆ. ಎಸ್.ಎನ್ ಭಟ್ ಉಪಸ್ಥಿತರಿದ್ದರು. ಈ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಅರಿವು ಮೂಡಿಸುವ ಪ್ರಯತ್ನ ಉಜಿರೆಯಲ್ಲಿ ಬೃಹತ್ ರ‍್ಯಾಲಿಯನ್ನು ಹಮ್ಮಿಕೊಂಡಿದ್ದು, ಇದರ ಚಾಲನೆಯನ್ನು ಪ್ರಸನ್ನ ಆಡಳಿತ ಅಧಿಕಾರಿಯಾದ ಕಿರಣ್ ಹೆಬ್ಬಾರ್ ನಡೆಸಿಕೊಟ್ಟರು.

Related posts

ಬೆಳ್ತಂಗಡಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಶಿಬಾಜೆ: ನಾಪತ್ತೆಯಾಗಿದ್ದ ಐಂಗುಡ ನಿವಾಸಿ ವಾಸು ರಾಣ್ಯ ಪತ್ತೆ

Suddi Udaya

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

Suddi Udaya

ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ವತಿಯಿಂದ 3 ಜೋಡಿ ಸರಳ ಸಮೂಹಿಕ ವಿವಾಹ

Suddi Udaya
error: Content is protected !!