23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ದೊಂಡೊಲೆಯ ವಿಕಲಚೇತನ ಕುಟುಂಬಕ್ಕೆ ಸಹಾಯಹಸ್ತ : ಅರ್ಹರ ಸೇವೆಗೆ ಬೆಳ್ತಂಗಡಿ ಲಯನ್ಸ್ ತೆರೆದುಕೊಂಡಿದೆ-ವಲಯಾಧ್ಯಕ್ಷ ದಿನೇಶ್

ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ಯು ಅರ್ಹರನ್ನು ಹುಡುಕಿ ಸೇವೆ ಮಾಡುವುದರಲ್ಲಿ ಮುಕ್ತ ಮನಸ್ಸಿನಿಂದ ತೆರೆದುಕೊಂಡಿದೆ ಎಂದು ವಲಯಾಧ್ಯಕ್ಷ ದಿನೇಶ್ ಎಂ.ಕೆ ಮೂಡುಬಿದಿರೆ ಮೆಚ್ಚುಗೆಯ ಮಾತನ್ನಾಡಿದರು‌.
ಪ್ರಾಂತ್ಯ-12 ರಲ್ಲಿ ಬರುವ ಬೆಳ್ತಂಗಡಿ ಘಟಕಕ್ಜೆ ಅಧಿಕೃತ ಭೇಟಿ ಮಾಡಿದ ಅವರು ಸೇವಾ ಕಾರ್ಯ ನಡೆಸಿಕೊಟ್ಟರು.
ವಿಶೇಷವಾಗಿ ಧರ್ಮಸ್ಥಳ ಗ್ರಾಮದ ದೊಂಡೊಲೆ ಎಂಬಲ್ಲಿ ಅತಂತ್ರ ಸ್ಥಿತಿಯಲ್ಲಿ ದಯನೀಯವಾಗಿ ಬದುಕು ಸಾಗಿಸುತ್ತಿರುವ ವಿಕಲ ಚೇತನರಿರುವ ಕುಟುಂಬಕ್ಕೆ ಆರ್ಥಿಕ ಸಹಕಾರ ಹಾಗೂ ಕುಟುಂಬದ ವಿದ್ಯಾರ್ಥಿಗೆ ಶೈಕ್ಷಣಿಕ ರಕ್ಷೆ ಹಸ್ತಾಂತರಿಸಿದರು.


ಬೆಳ್ತಂಗಡಿ ಲಯನ್ಸ್ ಘಟಕದ ಸುವರ್ಣ ಮಹೋತ್ಸವ ಅಧ್ಯಕ್ಷ ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಮೂಡುಬಿದಿರೆ, ವೇಣೂರು, ಸುಲ್ಕೇರಿ ಮತ್ತು ಬೆಳ್ತಂಗಡಿಯ ಅಧ್ಯಕ್ಷರುಗಳು, ನಿಕಟಪೂರ್ವ ಅಧ್ಯಕ್ಷ ದೇವಿಪ್ರಸಾದ್ ಬೊಳ್ಮ ಉಪಸ್ಥಿತರಿದ್ದರು.


ಕೃಷ್ಣ ಆಚಾರ್ ಪ್ರಾರ್ಥನೆ ಹಾಡಿದರು. ರಾಮಕೃಷ್ಣ ಗೌಡ ವೇದಿಕೆಗೆ ಆಹ್ವಾನಿಸಿದರು. ವಸಂತ ಶೆಟ್ಟಿ ವಲಯಾಧ್ಯಕ್ಷ ರನ್ನು ಪರಿಚಯಿಸಿದರು. ಧತ್ತಾತ್ರೇಯ ಗೊಲ್ಲ ಧ್ವಜವಂದನೆ, ಅಶ್ರಫ್ ಆಲಿಕುಂಞಿ ನೀತಿ ಸಂಹಿತೆ ವಾಚಿಸಿದರು. ಕಾರ್ಯದರ್ಶಿ ಅನಂತಕೃಷ್ಣ ವರದಿ ವಾಚಿಸಿ ಬಳಿಕ ವಲಯಾಧ್ಯಕ್ಷರಿಗೆ ಹಸ್ತಾಂತರಿಸಿದರು. ಕೋಶಾಧಿಕಾರಿ ಶುಭಾಶಿಣಿ ವಂದಿಸಿದರು.
ಪೂರ್ವ ಪ್ರಾಂತ್ಯಾಧ್ಯಕ್ಷ ನಿತ್ಯಾನಂದ ನಾವರ ಅವರ ಪುತ್ರಿ ಸಿ.ಎ ಉತ್ತೀರ್ಣರಾದ ನಿಮಿತ್ತ ಭೋಜನ ವ್ಯವಸ್ಥೆಯನ್ನು ಪ್ರಾಯೋಜಿಸಿದ್ದರು.
ಸೇವಾ ಕಾರ್ಯ ನಿಮಿತ್ತ ಬಡ ಕುಟುಂಬಕ್ಕೆ ಅಕ್ಕಿ, ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ವಿತರಿಸಲಾಯಿತು.

Related posts

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

Suddi Udaya

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಕಾರ್ಮಿಕರ ಮಹಾಸಭೆ

Suddi Udaya

ರಾಜಕೀಯ ಪ್ರೇರಿತವಾಗಿ ಶಾಸಕ ಹರೀಶ್ ಪೂಂಜರನ್ನು ಪೊಲೀಸರು ಬಂಧಿಸಿದರೆ ಉಗ್ರ ಹೋರಾಟ: ಕಟೀಲ್

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ್ರೌಢಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಲಾವಿದ ಮುಂಡಾಜೆಯ ಜಯರಾಂ ಕೆ. ಮೃತ್ಯು

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!