23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ದೊಂಡೊಲೆಯ ವಿಕಲಚೇತನ ಕುಟುಂಬಕ್ಕೆ ಸಹಾಯಹಸ್ತ : ಅರ್ಹರ ಸೇವೆಗೆ ಬೆಳ್ತಂಗಡಿ ಲಯನ್ಸ್ ತೆರೆದುಕೊಂಡಿದೆ-ವಲಯಾಧ್ಯಕ್ಷ ದಿನೇಶ್

ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ಯು ಅರ್ಹರನ್ನು ಹುಡುಕಿ ಸೇವೆ ಮಾಡುವುದರಲ್ಲಿ ಮುಕ್ತ ಮನಸ್ಸಿನಿಂದ ತೆರೆದುಕೊಂಡಿದೆ ಎಂದು ವಲಯಾಧ್ಯಕ್ಷ ದಿನೇಶ್ ಎಂ.ಕೆ ಮೂಡುಬಿದಿರೆ ಮೆಚ್ಚುಗೆಯ ಮಾತನ್ನಾಡಿದರು‌.
ಪ್ರಾಂತ್ಯ-12 ರಲ್ಲಿ ಬರುವ ಬೆಳ್ತಂಗಡಿ ಘಟಕಕ್ಜೆ ಅಧಿಕೃತ ಭೇಟಿ ಮಾಡಿದ ಅವರು ಸೇವಾ ಕಾರ್ಯ ನಡೆಸಿಕೊಟ್ಟರು.
ವಿಶೇಷವಾಗಿ ಧರ್ಮಸ್ಥಳ ಗ್ರಾಮದ ದೊಂಡೊಲೆ ಎಂಬಲ್ಲಿ ಅತಂತ್ರ ಸ್ಥಿತಿಯಲ್ಲಿ ದಯನೀಯವಾಗಿ ಬದುಕು ಸಾಗಿಸುತ್ತಿರುವ ವಿಕಲ ಚೇತನರಿರುವ ಕುಟುಂಬಕ್ಕೆ ಆರ್ಥಿಕ ಸಹಕಾರ ಹಾಗೂ ಕುಟುಂಬದ ವಿದ್ಯಾರ್ಥಿಗೆ ಶೈಕ್ಷಣಿಕ ರಕ್ಷೆ ಹಸ್ತಾಂತರಿಸಿದರು.


ಬೆಳ್ತಂಗಡಿ ಲಯನ್ಸ್ ಘಟಕದ ಸುವರ್ಣ ಮಹೋತ್ಸವ ಅಧ್ಯಕ್ಷ ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಮೂಡುಬಿದಿರೆ, ವೇಣೂರು, ಸುಲ್ಕೇರಿ ಮತ್ತು ಬೆಳ್ತಂಗಡಿಯ ಅಧ್ಯಕ್ಷರುಗಳು, ನಿಕಟಪೂರ್ವ ಅಧ್ಯಕ್ಷ ದೇವಿಪ್ರಸಾದ್ ಬೊಳ್ಮ ಉಪಸ್ಥಿತರಿದ್ದರು.


ಕೃಷ್ಣ ಆಚಾರ್ ಪ್ರಾರ್ಥನೆ ಹಾಡಿದರು. ರಾಮಕೃಷ್ಣ ಗೌಡ ವೇದಿಕೆಗೆ ಆಹ್ವಾನಿಸಿದರು. ವಸಂತ ಶೆಟ್ಟಿ ವಲಯಾಧ್ಯಕ್ಷ ರನ್ನು ಪರಿಚಯಿಸಿದರು. ಧತ್ತಾತ್ರೇಯ ಗೊಲ್ಲ ಧ್ವಜವಂದನೆ, ಅಶ್ರಫ್ ಆಲಿಕುಂಞಿ ನೀತಿ ಸಂಹಿತೆ ವಾಚಿಸಿದರು. ಕಾರ್ಯದರ್ಶಿ ಅನಂತಕೃಷ್ಣ ವರದಿ ವಾಚಿಸಿ ಬಳಿಕ ವಲಯಾಧ್ಯಕ್ಷರಿಗೆ ಹಸ್ತಾಂತರಿಸಿದರು. ಕೋಶಾಧಿಕಾರಿ ಶುಭಾಶಿಣಿ ವಂದಿಸಿದರು.
ಪೂರ್ವ ಪ್ರಾಂತ್ಯಾಧ್ಯಕ್ಷ ನಿತ್ಯಾನಂದ ನಾವರ ಅವರ ಪುತ್ರಿ ಸಿ.ಎ ಉತ್ತೀರ್ಣರಾದ ನಿಮಿತ್ತ ಭೋಜನ ವ್ಯವಸ್ಥೆಯನ್ನು ಪ್ರಾಯೋಜಿಸಿದ್ದರು.
ಸೇವಾ ಕಾರ್ಯ ನಿಮಿತ್ತ ಬಡ ಕುಟುಂಬಕ್ಕೆ ಅಕ್ಕಿ, ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ವಿತರಿಸಲಾಯಿತು.

Related posts

ಧರ್ಮಸ್ಥಳ : ಶ್ರೀ ಮಂ. ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ಶಿಕ್ಷಕಿ ಶ್ರೀಮತಿ ಗಿರಿಜಾ ಕುಮಾರಿ ಡಿ. ಎ ರವರಿಗೆ ಬೀಳ್ಕೊಡುಗೆ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ: ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ

Suddi Udaya

ಕೊಕ್ಕಡ: ಜೇಸಿ ಆಡಳಿತ ಸಭೆ: ಚುನಾವಣೆ ಅರಿವು ಆಂದೋಲನ ಕಾರ್ಯಕ್ರಮ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಉಗ್ರಾಣ ಹಾಗೂ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!