27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆ

ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆಯನ್ನು ಲಾಯಿಲ “ಭಗತ್ ಸಿಂಗ್” ವೃತ್ತದಲ್ಲಿ ಆಚರಿಸಲಾಯಿತು. ಭಗತ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅವರನ್ನು ಸ್ಮರಿಸಲಾಯಿತು.

ಲಾಯಿಲ ಗ್ರಾ.ಪಂ. ಸದಸ್ಯರಾದ ಅರವಿಂದ್ ಸ್ವಾಗತಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೃಷಿ ಯೋಜನಾಧಿಕಾರಿ ರಾಮ್ ಕುಮಾರ್ ಮರ್ನಾಡ್ ಇವರು ಭಗತ್ ಸಿಂಗ್ ಇವರ ಜೀವನ ಚರಿತ್ರೆಯ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ಲಾಯಿಲ ಜಂಕ್ಷನ್ ನಲ್ಲಿ ವೃತ್ತ ನಿರ್ಮಾಣ ಮಾಡಿದ ಹಿರಿಯರನ್ನು ಗೌರವಿಸಿ ಭಗತ್ ಸಿಂಗ್ ಇವರ ಜೀವನವನ್ನು ಆದರ್ಶವಾಗಿ ತೆಗೆದುಕೊಂಡು ನಾವು ಸಾಗಬೇಕು ಎಂದು ಜಗದೀಶ್ ಕನ್ನಾಜೆ ತಿಳಿಸಿದರು.

ಕಾರ್ಯಕ್ರಮದಲ್ಲಿ , ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಇದರ ಗೌರವ ಅಧ್ಯಕ್ಷರಾದ ಪ್ರಕಾಶ್ ಕಾಶಿಬೆಟ್ಟು, ಸಮಿತಿಯ ಸದಸ್ಯರು, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಲಾಯಿಲ ಇದರ ಸದಸ್ಯರು ಲಾಯಿಲ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂದಳ ಘಟಕದ ಕಾರ್ಯಕರ್ತ ಬಂಧುಗಳು, ನಗರ ಪಂಚಾಯತ್ ಸದಸ್ಯರಾದ ಶರತ್ ಕುಮಾರ್ , ಮೋಹನ್ ಭಟ್ ಗುರಿಂಗಾನ ,ಮತ್ತು ಊರಿನ ನಾಗರಿಕರು ಭಾಗವಹಿಸಿದರು.

ಗ್ರಾಮ ಪಂಚಾಯತ್ ನಿಕಟಪೂರ್ವ ಉಪಾಧ್ಯಕ್ಷ ಗಣೇಶ್ ಇವರು ಧನ್ಯವಾದಗೈದರು.

Related posts

ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಶ್ರೀಮದ್ಭಗವದ್ಗೀತಾ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭ

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಹೊರೆಕಾಣಿಕೆ ಪ್ರಯುಕ್ತ ಅಕ್ಕಿ ಸಮರ್ಪಣೆ

Suddi Udaya

ತಾಲೂಕು ಹಬ್ಬಗಳ ಆಚರಣೆ ಸಮಿತಿಯಿಂದ ಡಾ|| ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya
error: Content is protected !!