24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

ನಾರಾವಿ: “ಮಾದಕ ದ್ರವ್ಯಕ್ಕೆ ದಾಸರಾದವರು ಅವರಿಂದ ಹೊರಬರಲು ಕಷ್ಟಪಡಬೇಕಾಗುತ್ತದೆ.ಮಾದಕ ದ್ರವ್ಯ ಮನುಷ್ಯನಲ್ಲಿ ತಪ್ಪುಗಳನ್ನು ಮಾಡಿಸುತ್ತದೆ.ಮಾದಕ ವಸ್ತುಗಳ ಸೇವನೆಯ ಚಟವನ್ನು ಬಿಟ್ಟು ಮತ್ತೆ ಒಳ್ಳೆಯ ಬದುಕು ಕಟ್ಟಲು ಸಾದ್ಯವಿದೆ” ಎಂದು ಸಮಾಜಸೇವಕರಾದ ಶ್ರೀ ಮಾರ್ಕ್ ಡಿ ಸೋಜ ಮಂಗಳೂರು ಇವರು ಹೇಳಿದರು.


ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಎಸ್.ಸಿ.ಎಸ್ ಆಸ್ಪತ್ರೆ ಮಂಗಳೂರು ಇಲ್ಲಿನ ವೈದ್ಯರಾದ ಡಾ| ಅನಿರುದ್ಧ್ ಇವರು ಮಾದಕ ದ್ರವ್ಯ ಸೇವನೆಯು ಮನುಷ್ಯನ ಮೆದುಳನ್ನು ಯಾವ ರೀತಿಯಾಗಿ ಘಾಸಿಗೊಳಿಸುತ್ತದೆ ಎಂಬುದನ್ನು ತಿಳಿಸಿದರು.ಮದ್ಯದ ವ್ಯಸನಕ್ಕೆ ಬಲಿಯಾಗಿ ಮತ್ತೆ ಅದರಿಂದ ಹೊರಬಂದು ನೆಮ್ಮದಿಯ ಜೀವನ ಸಾಗಿಸುತ್ತಿರುವ ಹಾಗೂ ಸಮಾಜಸೇವಕರಾದ ಎಲಿಯಾಸ್ ಮೊಂತೆರೊ ತಾಕೊಡೆ ಇವರು ತಮ್ಮ ಜೀವನದ ಬಗ್ಗೆ ವಿವರಿಸಿ ಮದ್ಯವ್ಯಸನದಿಂದಾಗುವ ದುಷ್ಪರಿಣಾಮವನ್ನು ಸವಿಸ್ತಾರವಾಗಿ ತಿಳಿಸಿದರು.ಕಾಲೇಜಿನ ಪ್ರಾಚಾರ್ಯರಾದ ವಂ.ಡಾ. ಆಲ್ವಿನ್ ಸೆರಾವೊ ಎಲ್ಲರನ್ನು ಸ್ವಾಗತಿಸಿದರು.

ವೇದಿಕೆಯಲ್ಲಿ ಎನ್. ಎಸ್.ಎಸ್. ಯೋಜನಾಧಿಕಾರಿಗಳಾದ ದಿನೇಶ್ ಬಿ.ಕೆ. ,ಉಪಪ್ರಾಂಶುಪಾಲರಾದ ಸಂತೋಷ್ ಸಲ್ಡಾನ ಉಪಸ್ಥಿತರಿದ್ದರು. ಇತಿಹಾಸ ಉಪನ್ಯಾಸಕರಾದ ರಿಚರ್ಡ್ ಮೋರಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಜ.25: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷರ ಭೇಟಿ; ಪ್ರತಿಭಾ ಪುರಸ್ಕಾರ

Suddi Udaya

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya

ಸಿರಿ ಸಂಸ್ಥೆಯ ಎಂ.ಡಿ. ಕೆ.ಎನ್ ಜನಾರ್ಧನರವರಿಗೆ ‘ಪ್ರತಿಷ್ಠಿತ ಮಹಾತ್ಮಗಾಂಧಿ ಸದ್ಭಾವನಾ ಅಂತಾರಾಷ್ಟ್ರೀಯ ಪ್ರಶಸ್ತಿ’: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ಮೈಸೂರು ಚಲೋ ಪ್ರತಿಭಟನಾ ಪಾದಯಾತ್ರೆಯ ಕುರಿತು ಪಕ್ಷದ ಪದಾಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜರಿಂದ ಸಿದ್ಧತಾ ಸಭೆ

Suddi Udaya
error: Content is protected !!