23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

ನಾರಾವಿ: “ಮಾದಕ ದ್ರವ್ಯಕ್ಕೆ ದಾಸರಾದವರು ಅವರಿಂದ ಹೊರಬರಲು ಕಷ್ಟಪಡಬೇಕಾಗುತ್ತದೆ.ಮಾದಕ ದ್ರವ್ಯ ಮನುಷ್ಯನಲ್ಲಿ ತಪ್ಪುಗಳನ್ನು ಮಾಡಿಸುತ್ತದೆ.ಮಾದಕ ವಸ್ತುಗಳ ಸೇವನೆಯ ಚಟವನ್ನು ಬಿಟ್ಟು ಮತ್ತೆ ಒಳ್ಳೆಯ ಬದುಕು ಕಟ್ಟಲು ಸಾದ್ಯವಿದೆ” ಎಂದು ಸಮಾಜಸೇವಕರಾದ ಶ್ರೀ ಮಾರ್ಕ್ ಡಿ ಸೋಜ ಮಂಗಳೂರು ಇವರು ಹೇಳಿದರು.


ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಎಸ್.ಸಿ.ಎಸ್ ಆಸ್ಪತ್ರೆ ಮಂಗಳೂರು ಇಲ್ಲಿನ ವೈದ್ಯರಾದ ಡಾ| ಅನಿರುದ್ಧ್ ಇವರು ಮಾದಕ ದ್ರವ್ಯ ಸೇವನೆಯು ಮನುಷ್ಯನ ಮೆದುಳನ್ನು ಯಾವ ರೀತಿಯಾಗಿ ಘಾಸಿಗೊಳಿಸುತ್ತದೆ ಎಂಬುದನ್ನು ತಿಳಿಸಿದರು.ಮದ್ಯದ ವ್ಯಸನಕ್ಕೆ ಬಲಿಯಾಗಿ ಮತ್ತೆ ಅದರಿಂದ ಹೊರಬಂದು ನೆಮ್ಮದಿಯ ಜೀವನ ಸಾಗಿಸುತ್ತಿರುವ ಹಾಗೂ ಸಮಾಜಸೇವಕರಾದ ಎಲಿಯಾಸ್ ಮೊಂತೆರೊ ತಾಕೊಡೆ ಇವರು ತಮ್ಮ ಜೀವನದ ಬಗ್ಗೆ ವಿವರಿಸಿ ಮದ್ಯವ್ಯಸನದಿಂದಾಗುವ ದುಷ್ಪರಿಣಾಮವನ್ನು ಸವಿಸ್ತಾರವಾಗಿ ತಿಳಿಸಿದರು.ಕಾಲೇಜಿನ ಪ್ರಾಚಾರ್ಯರಾದ ವಂ.ಡಾ. ಆಲ್ವಿನ್ ಸೆರಾವೊ ಎಲ್ಲರನ್ನು ಸ್ವಾಗತಿಸಿದರು.

ವೇದಿಕೆಯಲ್ಲಿ ಎನ್. ಎಸ್.ಎಸ್. ಯೋಜನಾಧಿಕಾರಿಗಳಾದ ದಿನೇಶ್ ಬಿ.ಕೆ. ,ಉಪಪ್ರಾಂಶುಪಾಲರಾದ ಸಂತೋಷ್ ಸಲ್ಡಾನ ಉಪಸ್ಥಿತರಿದ್ದರು. ಇತಿಹಾಸ ಉಪನ್ಯಾಸಕರಾದ ರಿಚರ್ಡ್ ಮೋರಸ್ ಕಾರ್ಯಕ್ರಮ ನಿರೂಪಿಸಿದರು.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya

ಕಳೆಂಜ ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಉಪ್ಪಿನಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಆ. 27: ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಹಾಗೂ ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ. ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ

Suddi Udaya

ಬೆಳ್ತಂಗಡಿಗೆ ಲಗ್ಗೆ ಇಟ್ಟ ಅತ್ಯಾಧುನಿಕ ‘ಫೋರ್ಸ್ ಅರ್ಬಾನಿಯಾ’-ಐಷಾರಾಮಿ ಪ್ರಯಾಣದ ಹೊಸ ಪರ್ವ ಆರಂಭ

Suddi Udaya
error: Content is protected !!