23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೆ.30: ಬೆಳ್ತಂಗಡಿ ಪಶು ಸಂಗೋಪನಾ ಇಲಾಖೆಯಿಂದ 48 ಗ್ರಾ. ಪಂ. ಪಶುಸಖಿಯವರಿಗೆ ಉಚಿತವಾಗಿ ಕಿಟ್ ವಿತರಣೆ

ಬೆಳ್ತಂಗಡಿ: ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇವರ ವತಿಯಿಂದ ಜಾನುವರಗಳಿಗೆ ನಾಲ್ಕನೇ ಸುತ್ತಿನ ಕಾಲುಬಾಯಿ ಜ್ವರ ತಡೆಗಟ್ಟುವ ಲಸಿಕಾ ಅಭಿಯಾನದ ಚಾಲನೆ, ಪಶು ಸಖಿಯವರಿಗೆ ಇಲಾಖೆಯಿಂದ ಕಿಟ್ ವಿತರಣೆ ಹಾಗೂ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣೆ ಸೆ.30ರಂದು ಶನಿವಾರದಂದು ಬೆಳಿಗ್ಗೆ 10ಗಂಟೆಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಭವನದಲ್ಲಿ ನಡೆಯಲಿದೆ.


ಹರೀಶ್ ಪೂಂಜ ಶಾಸಕರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು , ಕೆ ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್ ವಿಧಾನ ಪರಿಷತ್ ಸದಸ್ಯರು, ಡಾ. ಅರುಣ್ ಕುಮಾರ್ ಶೆಟ್ಟಿ ಉಪನಿರ್ದೇಶಕರು, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧಿಕಾರಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಫಲಾನುಭವಿಗಳಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಹೈನುಗಾರಿಕೆಗೆ ಉಪಯುಕ್ತವಾದ ರಬ್ಬರ್ ಮ್ಯಾಟ್ ವಿತರಣೆ ನಡೆಯಲಿದೆ. ಬೆಳ್ತಂಗಡಿ ತಾಲೂಕಿನ 48 ಗ್ರಾಮ ಪಂಚಾಯಿತಿಯ ಪಶುಸಖಿಯವರಿಗೆ ಪಶು ಪಾಲನ ಇಲಾಖೆಯಿಂದ ಉಚಿತವಾಗಿ ಕಿಟ್ ವಿತರಣೆ ನಡೆಯಲಿದೆ ಎಂದು ಡಾ. ಜಯಕೀರ್ತಿ ಜೈನ್ ತಿಳಿಸಿದ್ದಾರೆ.

Related posts

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ – ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ: ಎಸ್ ಎಸ್ ಎಲ್ ಸಿ ಸಾಧಕ ಚಿನ್ಮಯಿ ಜಿ.ಕೆ ರವರಿಂದ ಶೈಕ್ಷಣಿಕ ವರ್ಷಕ್ಕೆ ಚಾಲನೆ

Suddi Udaya

ಪಡಂಗಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಅವಿರೋಧ ಆಯ್ಕೆ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿಯಲ್ಲಿ ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನ 13ನೇ ಶಾಖೆ ಶುಭಾರಂಭ: ಆರ್ಥಿಕ ವರ್ಷದಲ್ಲಿ 350 ಕೋಟಿ ವಹಿವಾಟನ್ನು ತಲುಪುವ ಗುರಿ: ಅಮೋಘ ಜೆ.ರೈ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya
error: Content is protected !!