23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಕಾಲೇಜಿನಲ್ಲಿ ಉಚಿತ ಫಿಸಿಯೋಥೆರಪಿ ಹಾಗೂ ಹೋಮಿಯೋಪಥಿಕ್ ತಪಸಣಾ ಶಿಬಿರ

ನಾರಾವಿ: ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ಇತ್ತೀಚೆಗೆ ಉಚಿತ ಫಿಸಿಯೋಥೆರಪಿ ಹಾಗೂ ಹೋಮಿಯೋಪಥಿಕ್ ತಪಸಣಾ ಶಿಬಿರವು ಕಾಲೇಜು ಸಭಾಂಗಣದಲ್ಲಿ ನೆರವೇರಿತು.

ಜಿ.ವಿ.ಸ್ಮಾರಕ ಆಸ್ಪತ್ರೆ ಮೂಡುಬಿದಿರೆ ಇಲ್ಲಿನ ವೈದ್ಯರಾದ ಡಾ||ಲಿಬಿನ್ ಮ್ಯಾಥ್ಯೂ ಇವರ ನೇತೃತ್ವದ ತಂಡವು ಉಚಿತ ಫಿಸಿಯೋಥೆರಪಿ ತಪಾಸಣಾ ಶಿಬಿರವನ್ನು ನಡೆಸಿಕೊಟ್ಟರು.ಅದೇ ರೀತಿ, ಡಾ||ರೆಮ್ಯಾ ಆರ್.ಇವರ ನೇತ್ರತ್ವದ ತಂಡವು ಉಚಿತ ಹೋಮಿಯೋಪಥಿಕ್ ತಪಸಣಾ ಶಿಬಿರವನ್ನು ನಡೆಸಿಕೊಟ್ಟಿತು.

ಕಾಲೇಜಿನ ಪ್ರಾಚಾರ್ಯರಾದ ವಂ.ಡಾ. ಆಲ್ವಿನ್ ಸೆರಾವೋ ಸ್ವಾಗತಿಸಿದರು. ಎನ್. ಎಸ್.ಎಸ್.ನ ಯೋಜನಾಧಿಕಾರಿ ಗಳಾದ ದಿನೇಶ್ ಬಿ.ಕೆ, ಉಪಪ್ರಾಂಶುಪಾಲರಾದ ಸಂತೋಷ್ ಸಲ್ಡಾನ, ಉಪನ್ಯಾಸಕರಾದ ಅವಿನಾಶ್ ಲೋಬೊ, ಸಂತೋಷ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಕಾರ್ಯಕ್ರಮಕ್ಕೆ ಸಹಕಾರ ನೀಡಿದರು. ಊರಿನ ಹಾಗೂ ಪರವೂರಿನ ನೂರಾರು ಜನರು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.

Related posts

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ : ಕೊಕ್ಕಡ ಶಾಖೆಯ ಸಂಚಾಲಕರಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಉಪ್ಪಿನಂಗಡಿ ಸ.ಪ.ಪೂ. ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿ ಸಂಘದ ರಚನಾ ಸಭೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ರೈತ ಸದಸ್ಯರಿಗೆ ಉಚಿತ ತರಕಾರಿ ಬೀಜ ವಿತರಣಾ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಕುಂಭಶ್ರೀ ಪಿಯು ಕಾಲೇಜಿನಲ್ಲಿ ಸಿಎ ಓರಿಯಂಟೇಶನ್ 2K25 ವಿಶೇಷ ಕಾರ್ಯಾಗಾರ

Suddi Udaya

ಎ.22: ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಕಾರ್ಯಕ್ರಮ

Suddi Udaya
error: Content is protected !!