September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಕಾಲೇಜಿನಲ್ಲಿ ಉಚಿತ ಫಿಸಿಯೋಥೆರಪಿ ಹಾಗೂ ಹೋಮಿಯೋಪಥಿಕ್ ತಪಸಣಾ ಶಿಬಿರ

ನಾರಾವಿ: ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ಇತ್ತೀಚೆಗೆ ಉಚಿತ ಫಿಸಿಯೋಥೆರಪಿ ಹಾಗೂ ಹೋಮಿಯೋಪಥಿಕ್ ತಪಸಣಾ ಶಿಬಿರವು ಕಾಲೇಜು ಸಭಾಂಗಣದಲ್ಲಿ ನೆರವೇರಿತು.

ಜಿ.ವಿ.ಸ್ಮಾರಕ ಆಸ್ಪತ್ರೆ ಮೂಡುಬಿದಿರೆ ಇಲ್ಲಿನ ವೈದ್ಯರಾದ ಡಾ||ಲಿಬಿನ್ ಮ್ಯಾಥ್ಯೂ ಇವರ ನೇತೃತ್ವದ ತಂಡವು ಉಚಿತ ಫಿಸಿಯೋಥೆರಪಿ ತಪಾಸಣಾ ಶಿಬಿರವನ್ನು ನಡೆಸಿಕೊಟ್ಟರು.ಅದೇ ರೀತಿ, ಡಾ||ರೆಮ್ಯಾ ಆರ್.ಇವರ ನೇತ್ರತ್ವದ ತಂಡವು ಉಚಿತ ಹೋಮಿಯೋಪಥಿಕ್ ತಪಸಣಾ ಶಿಬಿರವನ್ನು ನಡೆಸಿಕೊಟ್ಟಿತು.

ಕಾಲೇಜಿನ ಪ್ರಾಚಾರ್ಯರಾದ ವಂ.ಡಾ. ಆಲ್ವಿನ್ ಸೆರಾವೋ ಸ್ವಾಗತಿಸಿದರು. ಎನ್. ಎಸ್.ಎಸ್.ನ ಯೋಜನಾಧಿಕಾರಿ ಗಳಾದ ದಿನೇಶ್ ಬಿ.ಕೆ, ಉಪಪ್ರಾಂಶುಪಾಲರಾದ ಸಂತೋಷ್ ಸಲ್ಡಾನ, ಉಪನ್ಯಾಸಕರಾದ ಅವಿನಾಶ್ ಲೋಬೊ, ಸಂತೋಷ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಕಾರ್ಯಕ್ರಮಕ್ಕೆ ಸಹಕಾರ ನೀಡಿದರು. ಊರಿನ ಹಾಗೂ ಪರವೂರಿನ ನೂರಾರು ಜನರು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲದ ಆಶ್ರಯದಲ್ಲಿ ಕೇಸರ್ ದ ಕಂಡಡ್ ಒಂಜಿ ದಿನ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆ: ಸ್ಮಾರ್ಟ್‌ ಕ್ಲಾಸ್‌ ಲೋಕಾರ್ಪಣೆ

Suddi Udaya

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಭಾರೀ ಮಳೆಯಿಂದಾಗಿ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ತಕ್ಷಣದ ಸಹಾಯಕ್ಕಾಗಿ ಸಂಪರ್ಕಿಸುವಂತೆ ಶ್ರಮಿಕ‌ ಶಾಸಕರ ಕಾರ್ಯಾಲಯ ಮನವಿ

Suddi Udaya
error: Content is protected !!