23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ: ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2023 ಸಮೀಕ್ಷೆಯಲ್ಲಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಉತ್ತಮ ಸಾಧನೆ ಮಾಡಿರುವ ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ ಕೀರ್ತಿಗೆ ಪಾತ್ರವಾಗಿದೆ.
ಅ.2ರಂದು ಬೆಂಗಳೂರಿನ ವಿಧಾನ ಸೌಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಳಗ್ಗೆ 11 ಗಂಟೆಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಉಪಸ್ಥಿತಿಯಲ್ಲಿ ನಡೆಯಲಿರುವ “ಗಾಂಧೀ ಗ್ರಾಮ ಮುರಸ್ಕಾರ” ಸಮಾರಂಭದಲ್ಲಿ ಕಾಶಿಪಟ್ಣ ಗ್ರಾ.ಪಂ ಅಧ್ಯಕ್ಷ ಸತೀಶ್ ಕೆ.ಬಂಗೇರ ಹಾಗೂ ಪಿಡಿಒ ಆಶಾಲತಾ ಅವರು ‘ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2023’ ಪ್ರಶಸ್ತಿಯನ್ನು ಪಡೆದುಕೊಳ್ಳಲಿದ್ದಾರೆ. ಜಿಲ್ಲೆಯಿಂದ ಜಿಲ್ಲಾ ಎಸ್.ಬಿ.ಎಂ ನೋಡಲ್ ಅಧಿಕಾರಿಗಳು ಮತ್ತು ಒಬ್ಬರು ಜಿಲ್ಲಾ ಸಮಾಲೋಚಕರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.


ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲ ಶಕ್ತಿ ಮಂತ್ರಾಲಯ ಇವರು ಸ್ವಚ್ಚ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಸ್ವಚ್ಛ ಸವೇಕ್ಷಣ ಗ್ರಾಮೀಣ-2023 ಸಮೀಕ್ಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಇದರಲ್ಲಿ ತಾಲೂಕು ಮಟ್ಟದ ಮೌಲ್ಯಮಾಪನದಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ಗ್ರಾಮ ಪಂಚಾಯಿತಿಗಳನ್ನು ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಪ್ರತಿ ಜಿಲ್ಲೆಯಿಂದ ಮೂರು ವರ್ಗಗಳಲ್ಲಿ ಒಟ್ಟು 269 ಗ್ರಾಮ ಪಂಚಾಯಿತಿಗಳನ್ನು ರಾಜ್ಯ ಮಟ್ಟಕ್ಕೆ ಆರಿಸಲಾಗಿದ್ದು, ಅದರಲ್ಲಿ ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮ ಪಂಚಾಯತು ಆಯ್ಕೆಯಾಗಿದೆ.

Related posts

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಆಸ್ಪತ್ರೆಯ ವೈದ್ಯರು: ಅಸ್ಥಿಪಂಜರಗಳನ್ನು ಹೊರತೆಗೆಯುವ ಕಾರ್ಯಾಚರಣೆ

Suddi Udaya

ಮಚ್ಚಿನ: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ: ಅಪಾರ ನಷ್ಟ

Suddi Udaya

ನಾರಾವಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ನಿಡಿಗಲ್ ನಿವಾಸಿ ಸುನಂದಾದೇವಿ ನಿಧನ

Suddi Udaya

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

Suddi Udaya

ಶಿಶಿಲ ಗ್ರಾ.ಪಂ. ಅಧ್ಯಕ್ಷರಾಗಿ ಸುಧೀನ್, ಉಪಾಧ್ಯಕ್ಷರಾಗಿ ಯತೀಶ್ ಆಯ್ಕೆ

Suddi Udaya
error: Content is protected !!