25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿ ತಜ್ಞರ ದಿನಾಚರಣೆ: ಉಜಿರೆ ನಗರದಲ್ಲಿ ಜಾಗೃತಿ ರ‍್ಯಾಲಿ

ಬೆಳ್ತಂಗಡಿ: ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಜೌಷಧಿ ತಜ್ಞರ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ಶ್ರೀಧರ್ ಕೆ. ವಿ ಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ರಸಾಯನಶಾಸ್ತ್ರ ಮತ್ತು ವಿಶ್ವ ಔಷಧ ತಜ್ಞರ ದಿನದ ಮಹತ್ವವನ್ನು ತಿಳಿಯಪಡಿಸಿದರು. ಇನ್ನೋರ್ವ ಅತಿಥಿ ಡಾ| ಪ್ರಶಾಂತ್ ಬಿ. ಕೆ ಪ್ರಾಂಶುಪಾಲರು ಪ್ರಸನ್ನ ಕಾಲೇಜ್ ಆಫ್ ಆಯುರ್ವೇದ ಹಾಗೂ ಹಾಸ್ಪಿಟಲ್ ಇವರು ವಿದ್ಯಾರ್ಥಿಗಳಿಗೆ ಅಂಗಾಂಗ ದಾನದ ಮಹತ್ವವನ್ನು ವಿವರಿಸಿದರು.

ಪ್ರಸನ್ನ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರಾದ ಡಾ| ಎಂ. ಮಲ್ಲಿಕಾರ್ಜುನ್ ಗೌಡ ಫಾರ್ಮಸಿ ಕಲಿತ ವಿದ್ಯಾರ್ಥಿಗಳು ಮುಂದೆ ಸಮಾಜ ಆರೋಗ್ಯ ವಿಭಾಗದಲ್ಲಿ ಯಾವ ಯಾವ ರೀತಿಯಲ್ಲಿ ಸೇವೆ ಸಲ್ಲಿಸಬಹುದು ಎಂಬುದಾಗಿ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ಪ್ರಸನ್ನ ಸಿ.ಬಿ.ಎಸ್.ಇ ರೆಸಿಡೆನ್ಸಿಯಲ್ ಸ್ಕೂಲಿನ ಪ್ರಾಂಶುಪಾಲರಾದ ಕೆ. ಎಸ್.ಎನ್ ಭಟ್ ಉಪಸ್ಥಿತರಿದ್ದರು. ಈ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಅರಿವು ಮೂಡಿಸುವ ಪ್ರಯತ್ನ ಉಜಿರೆಯಲ್ಲಿ ಬೃಹತ್ ರ‍್ಯಾಲಿಯನ್ನು ಹಮ್ಮಿಕೊಂಡಿದ್ದು, ಇದರ ಚಾಲನೆಯನ್ನು ಪ್ರಸನ್ನ ಆಡಳಿತ ಅಧಿಕಾರಿಯಾದ ಕಿರಣ್ ಹೆಬ್ಬಾರ್ ನಡೆಸಿಕೊಟ್ಟರು.

Related posts

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆ ಪ್ರತಿಭಾ ಪುರಸ್ಕಾರ 2025

Suddi Udaya

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ನಮ್ಮ ಮನೆ ಶಾಖೆಯ ವಾರ್ಷಿಕೋತ್ಸವ

Suddi Udaya

ಸ್ನಾತಕೋತ್ತರ ವಿಭಾಗದಲ್ಲಿ ನೈನಾಡಿನ ಚೇತನಾ ರವರಿಗೆ ನಾಲ್ಕು ಚಿನ್ನದ ಪದಕ

Suddi Udaya

ಸುದ್ದಿ ಉದಯ ವಾರ ಪತ್ರಿಕೆ ದೀಪಾವಳಿ ವಿಶೇಷಾಂಕ ಹಾಗೂ ‘ಹೇ ಶಾರದೆ’ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಕುಕ್ಕೇಡಿ, ವೇಣೂರು, ಅಂಡಿಂಜೆ, ಅಳದಂಗಡಿ, ಬಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya
error: Content is protected !!