25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿ ತಜ್ಞರ ದಿನಾಚರಣೆ: ಉಜಿರೆ ನಗರದಲ್ಲಿ ಜಾಗೃತಿ ರ‍್ಯಾಲಿ

ಬೆಳ್ತಂಗಡಿ: ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಜೌಷಧಿ ತಜ್ಞರ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ಶ್ರೀಧರ್ ಕೆ. ವಿ ಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ರಸಾಯನಶಾಸ್ತ್ರ ಮತ್ತು ವಿಶ್ವ ಔಷಧ ತಜ್ಞರ ದಿನದ ಮಹತ್ವವನ್ನು ತಿಳಿಯಪಡಿಸಿದರು. ಇನ್ನೋರ್ವ ಅತಿಥಿ ಡಾ| ಪ್ರಶಾಂತ್ ಬಿ. ಕೆ ಪ್ರಾಂಶುಪಾಲರು ಪ್ರಸನ್ನ ಕಾಲೇಜ್ ಆಫ್ ಆಯುರ್ವೇದ ಹಾಗೂ ಹಾಸ್ಪಿಟಲ್ ಇವರು ವಿದ್ಯಾರ್ಥಿಗಳಿಗೆ ಅಂಗಾಂಗ ದಾನದ ಮಹತ್ವವನ್ನು ವಿವರಿಸಿದರು.

ಪ್ರಸನ್ನ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರಾದ ಡಾ| ಎಂ. ಮಲ್ಲಿಕಾರ್ಜುನ್ ಗೌಡ ಫಾರ್ಮಸಿ ಕಲಿತ ವಿದ್ಯಾರ್ಥಿಗಳು ಮುಂದೆ ಸಮಾಜ ಆರೋಗ್ಯ ವಿಭಾಗದಲ್ಲಿ ಯಾವ ಯಾವ ರೀತಿಯಲ್ಲಿ ಸೇವೆ ಸಲ್ಲಿಸಬಹುದು ಎಂಬುದಾಗಿ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ಪ್ರಸನ್ನ ಸಿ.ಬಿ.ಎಸ್.ಇ ರೆಸಿಡೆನ್ಸಿಯಲ್ ಸ್ಕೂಲಿನ ಪ್ರಾಂಶುಪಾಲರಾದ ಕೆ. ಎಸ್.ಎನ್ ಭಟ್ ಉಪಸ್ಥಿತರಿದ್ದರು. ಈ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಅರಿವು ಮೂಡಿಸುವ ಪ್ರಯತ್ನ ಉಜಿರೆಯಲ್ಲಿ ಬೃಹತ್ ರ‍್ಯಾಲಿಯನ್ನು ಹಮ್ಮಿಕೊಂಡಿದ್ದು, ಇದರ ಚಾಲನೆಯನ್ನು ಪ್ರಸನ್ನ ಆಡಳಿತ ಅಧಿಕಾರಿಯಾದ ಕಿರಣ್ ಹೆಬ್ಬಾರ್ ನಡೆಸಿಕೊಟ್ಟರು.

Related posts

ಹಾವು ಕಡಿತದಿಂದ ಶಿಶಿಲ ಕಾರೆಗುಡ್ಡೆ ನಿವಾಸಿ ಚೋಮ ನಿಧನ

Suddi Udaya

ಎಸ್ ಡಿ ಎಂ ಎನ್ ಎಸ್ ಎಸ್ ಘಟಕಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ

Suddi Udaya

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

Suddi Udaya

ಜನರ ಬಳಿಗೆ ತಾಲೂಕು ಆಡಳಿತ : ನಾರಾವಿಯಲ್ಲಿ ಶಾಸಕರ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ ಆರಂಭ

Suddi Udaya

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!