September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿ ತಜ್ಞರ ದಿನಾಚರಣೆ: ಉಜಿರೆ ನಗರದಲ್ಲಿ ಜಾಗೃತಿ ರ‍್ಯಾಲಿ

ಬೆಳ್ತಂಗಡಿ: ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಜೌಷಧಿ ತಜ್ಞರ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ಶ್ರೀಧರ್ ಕೆ. ವಿ ಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ರಸಾಯನಶಾಸ್ತ್ರ ಮತ್ತು ವಿಶ್ವ ಔಷಧ ತಜ್ಞರ ದಿನದ ಮಹತ್ವವನ್ನು ತಿಳಿಯಪಡಿಸಿದರು. ಇನ್ನೋರ್ವ ಅತಿಥಿ ಡಾ| ಪ್ರಶಾಂತ್ ಬಿ. ಕೆ ಪ್ರಾಂಶುಪಾಲರು ಪ್ರಸನ್ನ ಕಾಲೇಜ್ ಆಫ್ ಆಯುರ್ವೇದ ಹಾಗೂ ಹಾಸ್ಪಿಟಲ್ ಇವರು ವಿದ್ಯಾರ್ಥಿಗಳಿಗೆ ಅಂಗಾಂಗ ದಾನದ ಮಹತ್ವವನ್ನು ವಿವರಿಸಿದರು.

ಪ್ರಸನ್ನ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರಾದ ಡಾ| ಎಂ. ಮಲ್ಲಿಕಾರ್ಜುನ್ ಗೌಡ ಫಾರ್ಮಸಿ ಕಲಿತ ವಿದ್ಯಾರ್ಥಿಗಳು ಮುಂದೆ ಸಮಾಜ ಆರೋಗ್ಯ ವಿಭಾಗದಲ್ಲಿ ಯಾವ ಯಾವ ರೀತಿಯಲ್ಲಿ ಸೇವೆ ಸಲ್ಲಿಸಬಹುದು ಎಂಬುದಾಗಿ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ಪ್ರಸನ್ನ ಸಿ.ಬಿ.ಎಸ್.ಇ ರೆಸಿಡೆನ್ಸಿಯಲ್ ಸ್ಕೂಲಿನ ಪ್ರಾಂಶುಪಾಲರಾದ ಕೆ. ಎಸ್.ಎನ್ ಭಟ್ ಉಪಸ್ಥಿತರಿದ್ದರು. ಈ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಅರಿವು ಮೂಡಿಸುವ ಪ್ರಯತ್ನ ಉಜಿರೆಯಲ್ಲಿ ಬೃಹತ್ ರ‍್ಯಾಲಿಯನ್ನು ಹಮ್ಮಿಕೊಂಡಿದ್ದು, ಇದರ ಚಾಲನೆಯನ್ನು ಪ್ರಸನ್ನ ಆಡಳಿತ ಅಧಿಕಾರಿಯಾದ ಕಿರಣ್ ಹೆಬ್ಬಾರ್ ನಡೆಸಿಕೊಟ್ಟರು.

Related posts

ನಾಪತ್ತೆಯಾಗಿದ್ದ ಮಾಚಾರು ನಿವಾಸಿ ಆಟೋ ಚಾಲಕ ಸುಧಾಕರ್ ಮೃತದೇಹ ನೆಲ್ಲಿಕಾರ್ ಕಾಡಿನಲ್ಲಿ ನೇಣು ಹಾಕಿಕೊಂಡ ರೀತಿಯಲ್ಲಿ ಪತ್ತೆ

Suddi Udaya

ಸೋಣಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಮಹಿಳಾ ಕಾಂಗ್ರೆಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ಬೃಂದಾವನ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಗ್ರಾ.ಪಂ. ಕುಕ್ಕೇಡಿ ವತಿಯಿಂದ ನರೇಗಾ ಫಲಾನುಭವಿಗಳಿಗೆ ಗಿಡ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿಯ ಮಹಾಸಂಗಮ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ: ಕಾವಳಕಟ್ಟೆ ಮುಂಡಬೈಲು ನಿವಾಸಿ ಶತಾಯುಷಿ ರುಕ್ಮಿಣಿ ನಿಧನ

Suddi Udaya
error: Content is protected !!