September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆ

ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆಯನ್ನು ಲಾಯಿಲ “ಭಗತ್ ಸಿಂಗ್” ವೃತ್ತದಲ್ಲಿ ಆಚರಿಸಲಾಯಿತು. ಭಗತ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅವರನ್ನು ಸ್ಮರಿಸಲಾಯಿತು.

ಲಾಯಿಲ ಗ್ರಾ.ಪಂ. ಸದಸ್ಯರಾದ ಅರವಿಂದ್ ಸ್ವಾಗತಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೃಷಿ ಯೋಜನಾಧಿಕಾರಿ ರಾಮ್ ಕುಮಾರ್ ಮರ್ನಾಡ್ ಇವರು ಭಗತ್ ಸಿಂಗ್ ಇವರ ಜೀವನ ಚರಿತ್ರೆಯ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ಲಾಯಿಲ ಜಂಕ್ಷನ್ ನಲ್ಲಿ ವೃತ್ತ ನಿರ್ಮಾಣ ಮಾಡಿದ ಹಿರಿಯರನ್ನು ಗೌರವಿಸಿ ಭಗತ್ ಸಿಂಗ್ ಇವರ ಜೀವನವನ್ನು ಆದರ್ಶವಾಗಿ ತೆಗೆದುಕೊಂಡು ನಾವು ಸಾಗಬೇಕು ಎಂದು ಜಗದೀಶ್ ಕನ್ನಾಜೆ ತಿಳಿಸಿದರು.

ಕಾರ್ಯಕ್ರಮದಲ್ಲಿ , ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಇದರ ಗೌರವ ಅಧ್ಯಕ್ಷರಾದ ಪ್ರಕಾಶ್ ಕಾಶಿಬೆಟ್ಟು, ಸಮಿತಿಯ ಸದಸ್ಯರು, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಲಾಯಿಲ ಇದರ ಸದಸ್ಯರು ಲಾಯಿಲ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂದಳ ಘಟಕದ ಕಾರ್ಯಕರ್ತ ಬಂಧುಗಳು, ನಗರ ಪಂಚಾಯತ್ ಸದಸ್ಯರಾದ ಶರತ್ ಕುಮಾರ್ , ಮೋಹನ್ ಭಟ್ ಗುರಿಂಗಾನ ,ಮತ್ತು ಊರಿನ ನಾಗರಿಕರು ಭಾಗವಹಿಸಿದರು.

ಗ್ರಾಮ ಪಂಚಾಯತ್ ನಿಕಟಪೂರ್ವ ಉಪಾಧ್ಯಕ್ಷ ಗಣೇಶ್ ಇವರು ಧನ್ಯವಾದಗೈದರು.

Related posts

ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾ ಮಹೋತ್ಸವದ ಪೂರ್ವಭಾವಿಯಾಗಿ ಅನುಜ್ಞ ಕಲಶ ಮತ್ತು ಸಂಕೋಚ ವಿಧಿ

Suddi Udaya

ಬಂದಾರು-ಕೊಕ್ಕಡ ಗ್ರಾಮವನ್ನು ಬೆಸೆಯುವ ಮೈಪಾಲ ಸೇತುವೆ ಕಾಮಗಾರಿ ವೀಕ್ಷಿಸಿದ ಶಾಸಕ ಹರೀಶ್ ಪೂಂಜ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹೊಸಂಗಡಿ ವಲಯದ ಕೇಳದಪೇಟೆ ಕಾರ್ಯಕ್ಷೇತ್ರದ ವತಿಯಿಂದ ವೀಲ್ ಚಯರ್ ವಿತರಣೆ

Suddi Udaya

ಉಜಿರೆಯ ಐಕಾನ್ ಗೆ ಪ್ಲಾಟಿನಂ ಸೆಂಟರ್ ಅವಾರ್ಡ್ ಸೇರಿ ಅನೇಕ ಗೌರವಗಳು

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ. ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ನಡ ಶಾಲೆಯ ಶತಮಾನೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!