22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆ

ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆಯನ್ನು ಲಾಯಿಲ “ಭಗತ್ ಸಿಂಗ್” ವೃತ್ತದಲ್ಲಿ ಆಚರಿಸಲಾಯಿತು. ಭಗತ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅವರನ್ನು ಸ್ಮರಿಸಲಾಯಿತು.

ಲಾಯಿಲ ಗ್ರಾ.ಪಂ. ಸದಸ್ಯರಾದ ಅರವಿಂದ್ ಸ್ವಾಗತಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೃಷಿ ಯೋಜನಾಧಿಕಾರಿ ರಾಮ್ ಕುಮಾರ್ ಮರ್ನಾಡ್ ಇವರು ಭಗತ್ ಸಿಂಗ್ ಇವರ ಜೀವನ ಚರಿತ್ರೆಯ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ಲಾಯಿಲ ಜಂಕ್ಷನ್ ನಲ್ಲಿ ವೃತ್ತ ನಿರ್ಮಾಣ ಮಾಡಿದ ಹಿರಿಯರನ್ನು ಗೌರವಿಸಿ ಭಗತ್ ಸಿಂಗ್ ಇವರ ಜೀವನವನ್ನು ಆದರ್ಶವಾಗಿ ತೆಗೆದುಕೊಂಡು ನಾವು ಸಾಗಬೇಕು ಎಂದು ಜಗದೀಶ್ ಕನ್ನಾಜೆ ತಿಳಿಸಿದರು.

ಕಾರ್ಯಕ್ರಮದಲ್ಲಿ , ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಇದರ ಗೌರವ ಅಧ್ಯಕ್ಷರಾದ ಪ್ರಕಾಶ್ ಕಾಶಿಬೆಟ್ಟು, ಸಮಿತಿಯ ಸದಸ್ಯರು, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಲಾಯಿಲ ಇದರ ಸದಸ್ಯರು ಲಾಯಿಲ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂದಳ ಘಟಕದ ಕಾರ್ಯಕರ್ತ ಬಂಧುಗಳು, ನಗರ ಪಂಚಾಯತ್ ಸದಸ್ಯರಾದ ಶರತ್ ಕುಮಾರ್ , ಮೋಹನ್ ಭಟ್ ಗುರಿಂಗಾನ ,ಮತ್ತು ಊರಿನ ನಾಗರಿಕರು ಭಾಗವಹಿಸಿದರು.

ಗ್ರಾಮ ಪಂಚಾಯತ್ ನಿಕಟಪೂರ್ವ ಉಪಾಧ್ಯಕ್ಷ ಗಣೇಶ್ ಇವರು ಧನ್ಯವಾದಗೈದರು.

Related posts

ಮುಂಡಾಜೆ ವಲಯದ ಕಾನರ್ಪ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಮಕ್ಕಾದಲ್ಲಿ ನಿಧನ ಹೊಂದಿದ ಉಮ್ರಾ ಯಾರ್ತಾರ್ಥಿಯ ಅಂತ್ಯಸಂಸ್ಕಾರ‌ಕ್ಕೆ ನೇತೃತ್ವ ವಹಿಸಿದ ಕಿಲ್ಲೂರಿನ ಅಬ್ದುಲ್ ಅಝೀಝ್ ಝುಹುರಿ

Suddi Udaya

ಮಚ್ಚಿನ: ಸಂವಿಧಾನ ಜಾಗೃತಿ ಜಾಥ

Suddi Udaya

ಪುಂಜಾಲಕಟ್ಟೆ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯ ಬಾಲಕರ ತಂಡಕ್ಕೆ ಪ್ರಶಸ್ತಿ

Suddi Udaya

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಉಜಿರೆ ಮಹಿಳಾ ಜ್ಞಾನವಿಕಾಸ ಕೇಂದ್ರದಲ್ಲಿ ಬೀದಿ ನಾಟಕ

Suddi Udaya
error: Content is protected !!