ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

ನಾರಾವಿ: “ಮಾದಕ ದ್ರವ್ಯಕ್ಕೆ ದಾಸರಾದವರು ಅವರಿಂದ ಹೊರಬರಲು ಕಷ್ಟಪಡಬೇಕಾಗುತ್ತದೆ.ಮಾದಕ ದ್ರವ್ಯ ಮನುಷ್ಯನಲ್ಲಿ ತಪ್ಪುಗಳನ್ನು ಮಾಡಿಸುತ್ತದೆ.ಮಾದಕ ವಸ್ತುಗಳ ಸೇವನೆಯ ಚಟವನ್ನು ಬಿಟ್ಟು ಮತ್ತೆ ಒಳ್ಳೆಯ ಬದುಕು ಕಟ್ಟಲು ಸಾದ್ಯವಿದೆ” ಎಂದು ಸಮಾಜಸೇವಕರಾದ ಶ್ರೀ ಮಾರ್ಕ್ ಡಿ ಸೋಜ ಮಂಗಳೂರು ಇವರು ಹೇಳಿದರು.


ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಎಸ್.ಸಿ.ಎಸ್ ಆಸ್ಪತ್ರೆ ಮಂಗಳೂರು ಇಲ್ಲಿನ ವೈದ್ಯರಾದ ಡಾ| ಅನಿರುದ್ಧ್ ಇವರು ಮಾದಕ ದ್ರವ್ಯ ಸೇವನೆಯು ಮನುಷ್ಯನ ಮೆದುಳನ್ನು ಯಾವ ರೀತಿಯಾಗಿ ಘಾಸಿಗೊಳಿಸುತ್ತದೆ ಎಂಬುದನ್ನು ತಿಳಿಸಿದರು.ಮದ್ಯದ ವ್ಯಸನಕ್ಕೆ ಬಲಿಯಾಗಿ ಮತ್ತೆ ಅದರಿಂದ ಹೊರಬಂದು ನೆಮ್ಮದಿಯ ಜೀವನ ಸಾಗಿಸುತ್ತಿರುವ ಹಾಗೂ ಸಮಾಜಸೇವಕರಾದ ಎಲಿಯಾಸ್ ಮೊಂತೆರೊ ತಾಕೊಡೆ ಇವರು ತಮ್ಮ ಜೀವನದ ಬಗ್ಗೆ ವಿವರಿಸಿ ಮದ್ಯವ್ಯಸನದಿಂದಾಗುವ ದುಷ್ಪರಿಣಾಮವನ್ನು ಸವಿಸ್ತಾರವಾಗಿ ತಿಳಿಸಿದರು.ಕಾಲೇಜಿನ ಪ್ರಾಚಾರ್ಯರಾದ ವಂ.ಡಾ. ಆಲ್ವಿನ್ ಸೆರಾವೊ ಎಲ್ಲರನ್ನು ಸ್ವಾಗತಿಸಿದರು.

ವೇದಿಕೆಯಲ್ಲಿ ಎನ್. ಎಸ್.ಎಸ್. ಯೋಜನಾಧಿಕಾರಿಗಳಾದ ದಿನೇಶ್ ಬಿ.ಕೆ. ,ಉಪಪ್ರಾಂಶುಪಾಲರಾದ ಸಂತೋಷ್ ಸಲ್ಡಾನ ಉಪಸ್ಥಿತರಿದ್ದರು. ಇತಿಹಾಸ ಉಪನ್ಯಾಸಕರಾದ ರಿಚರ್ಡ್ ಮೋರಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಗುರುವಾಯನಕೆರೆ: 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆಯ್ಕೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಾಗಾರ”

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಭೇಟಿ

Suddi Udaya

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 59.78 ಲಕ್ಷ ಲಾಭ , ಸದಸ್ಯರಿಗೆ ಶೇ. 7 ಡಿವಿಡೆಂಟ್ ಘೋಷಣೆ

Suddi Udaya
error: Content is protected !!