27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೆ.30: ಬೆಳ್ತಂಗಡಿ ಪಶು ಸಂಗೋಪನಾ ಇಲಾಖೆಯಿಂದ 48 ಗ್ರಾ. ಪಂ. ಪಶುಸಖಿಯವರಿಗೆ ಉಚಿತವಾಗಿ ಕಿಟ್ ವಿತರಣೆ

ಬೆಳ್ತಂಗಡಿ: ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇವರ ವತಿಯಿಂದ ಜಾನುವರಗಳಿಗೆ ನಾಲ್ಕನೇ ಸುತ್ತಿನ ಕಾಲುಬಾಯಿ ಜ್ವರ ತಡೆಗಟ್ಟುವ ಲಸಿಕಾ ಅಭಿಯಾನದ ಚಾಲನೆ, ಪಶು ಸಖಿಯವರಿಗೆ ಇಲಾಖೆಯಿಂದ ಕಿಟ್ ವಿತರಣೆ ಹಾಗೂ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣೆ ಸೆ.30ರಂದು ಶನಿವಾರದಂದು ಬೆಳಿಗ್ಗೆ 10ಗಂಟೆಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಭವನದಲ್ಲಿ ನಡೆಯಲಿದೆ.


ಹರೀಶ್ ಪೂಂಜ ಶಾಸಕರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು , ಕೆ ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್ ವಿಧಾನ ಪರಿಷತ್ ಸದಸ್ಯರು, ಡಾ. ಅರುಣ್ ಕುಮಾರ್ ಶೆಟ್ಟಿ ಉಪನಿರ್ದೇಶಕರು, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧಿಕಾರಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಫಲಾನುಭವಿಗಳಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಹೈನುಗಾರಿಕೆಗೆ ಉಪಯುಕ್ತವಾದ ರಬ್ಬರ್ ಮ್ಯಾಟ್ ವಿತರಣೆ ನಡೆಯಲಿದೆ. ಬೆಳ್ತಂಗಡಿ ತಾಲೂಕಿನ 48 ಗ್ರಾಮ ಪಂಚಾಯಿತಿಯ ಪಶುಸಖಿಯವರಿಗೆ ಪಶು ಪಾಲನ ಇಲಾಖೆಯಿಂದ ಉಚಿತವಾಗಿ ಕಿಟ್ ವಿತರಣೆ ನಡೆಯಲಿದೆ ಎಂದು ಡಾ. ಜಯಕೀರ್ತಿ ಜೈನ್ ತಿಳಿಸಿದ್ದಾರೆ.

Related posts

ಕಣಿಯೂರು: ಕುಡುವಂತಿ ನಿವಾಸಿ ಪುತ್ತು ನಾಯ್ಕ ನಿಧನ

Suddi Udaya

ಹೆದ್ದಾರಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ಮಳೆಗಾಲ ಪ್ರಾರಂಭ ಮುನ್ನ ಮುನ್ನೆಚ್ಚರಿಕೆ ವಹಿಸುವಂತೆ  ಜಿಲ್ಲಾಧಿಕಾರಿ ಮುಲೈ ಮುಗಿಲನ್ ರವರಿಗೆ ಬ್ರಿಜೇಶ್ ಚೌಟ ಮನವಿ

Suddi Udaya

ಮಚ್ಚಿನ: ರಸ್ತೆಯ ಬದಿಯಲ್ಲಿ ತ್ಯಾಜ್ಯಗಳ ದುರ್ವಾಸನೆ: ಕ್ರಮ ಕೈಗೊಳ್ಳಲು ಗ್ರಾಮಸ್ಥರ ಒತ್ತಾಯ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕುವೆಟ್ಟು: ಕರ್ತವ್ಯ ಲೋಪ ಎಸಗಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ: ಸಾಮಾನ್ಯ ಸಭೆ ಬಹಿಷ್ಕರಿಸಿದ ಸದಸ್ಯರು

Suddi Udaya

ರೇಷ್ಮೆರೋಡ್: ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya
error: Content is protected !!