July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೆ.30: ಬೆಳ್ತಂಗಡಿ ಪಶು ಸಂಗೋಪನಾ ಇಲಾಖೆಯಿಂದ 48 ಗ್ರಾ. ಪಂ. ಪಶುಸಖಿಯವರಿಗೆ ಉಚಿತವಾಗಿ ಕಿಟ್ ವಿತರಣೆ

ಬೆಳ್ತಂಗಡಿ: ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇವರ ವತಿಯಿಂದ ಜಾನುವರಗಳಿಗೆ ನಾಲ್ಕನೇ ಸುತ್ತಿನ ಕಾಲುಬಾಯಿ ಜ್ವರ ತಡೆಗಟ್ಟುವ ಲಸಿಕಾ ಅಭಿಯಾನದ ಚಾಲನೆ, ಪಶು ಸಖಿಯವರಿಗೆ ಇಲಾಖೆಯಿಂದ ಕಿಟ್ ವಿತರಣೆ ಹಾಗೂ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣೆ ಸೆ.30ರಂದು ಶನಿವಾರದಂದು ಬೆಳಿಗ್ಗೆ 10ಗಂಟೆಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಭವನದಲ್ಲಿ ನಡೆಯಲಿದೆ.


ಹರೀಶ್ ಪೂಂಜ ಶಾಸಕರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು , ಕೆ ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್ ವಿಧಾನ ಪರಿಷತ್ ಸದಸ್ಯರು, ಡಾ. ಅರುಣ್ ಕುಮಾರ್ ಶೆಟ್ಟಿ ಉಪನಿರ್ದೇಶಕರು, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧಿಕಾರಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಫಲಾನುಭವಿಗಳಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಹೈನುಗಾರಿಕೆಗೆ ಉಪಯುಕ್ತವಾದ ರಬ್ಬರ್ ಮ್ಯಾಟ್ ವಿತರಣೆ ನಡೆಯಲಿದೆ. ಬೆಳ್ತಂಗಡಿ ತಾಲೂಕಿನ 48 ಗ್ರಾಮ ಪಂಚಾಯಿತಿಯ ಪಶುಸಖಿಯವರಿಗೆ ಪಶು ಪಾಲನ ಇಲಾಖೆಯಿಂದ ಉಚಿತವಾಗಿ ಕಿಟ್ ವಿತರಣೆ ನಡೆಯಲಿದೆ ಎಂದು ಡಾ. ಜಯಕೀರ್ತಿ ಜೈನ್ ತಿಳಿಸಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರದಲ್ಲಿ ಸಾನಿಧ್ಯ ದೈವಗಳ ವಾರ್ಷಿಕ ಪ್ರತಿಷ್ಠಾಪನಾ ಮಹೋತ್ಸವ

Suddi Udaya

ಶಿರ್ಲಾಲು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಉಷಾ ಎಂ ಶೆಟ್ಟಿ, ಉಪಾಧ್ಯಕ್ಷರಾಗಿ ಸೋಮನಾಥ ಬಂಗೇರ ಅವಿರೋಧವಾಗಿ ಆಯ್ಕೆ

Suddi Udaya

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮ

Suddi Udaya

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya
error: Content is protected !!