23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ರಾ.ಸೇ ಯೋಜನೆಯ ವಿಶೇಷ ಕಾರ್ಯಾಗಾರ ಉದ್ಘಾಟನೆ

ಉಜಿರೆ : ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಭಾಗವಹಿಸುವ ಅವಕಾಶ ಪಡೆಯುವುದು ಮಾತ್ರವಲ್ಲ ನಾವು ಅದರಲ್ಲಿ ಹೇಗೆ ತೊಡಗಿಸಿಕೊಂಡಿದ್ದೇನೆ , ನನ್ನ ವ್ಯಕ್ತಿತ್ವಕ್ಕೆ ಯಾವ ವಿಷಯಗಳನ್ನು ಪಡೆದುಕೊಂಡಿದ್ದೇವೆ ಎನ್ನುವುದು ಮುಖ್ಯ. ಹೊಂದಾಣಿಕೆಯ ಜೀವನ , ಪರಸ್ಪರ ತಿಳುವಳಿಕೆ ಇತ್ಯಾದಿಗಳಿಗೆ ರಾ.ಸೇ ಯೋಜನೆಯ ಶಿಬಿರಗಳು ಪೂರಕ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಅವರು ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ನಡೆದ ಒಂದು ದಿನದ ವಿಶೇಷ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಆನಂತರ ನಡೆದ ಕಾರ್ಯಾಗಾರದಲ್ಲಿ ಹಿರಿಯ ಸ್ವಯಂ ಸೇವಕರಾದ ಧನುಷ್ ಕೆ.ಪಿ , ಶಶಿಕಿರಣ್ ಹಾಗೂ ಉಜಿರೆ ಶ್ರೀ ಧ.ಮಂ ಪದವಿ ಕಾಲೇಜಿನ ರಾ.ಸೇ ಯೋಜನೆಯ ಸ್ವಯಂ ಸೇವಕರಾದ ನಿಸರ್ಗ ಹಾಗೂ ಯಕ್ಷಿತ್ ಅವರು ವರದಿ ತಯಾರಿಕೆ, ಸಿಂಚನಾ ಅವರು ಕಾರ್ಯಕ್ರಮ ನಿರ್ವಹಣೆ ಬಗ್ಗೆ, ಅನಂತ್ ಅವರು ಭಿತ್ತಿಪತ್ರಿಕೆ ಬಗ್ಗೆ ಮಾಹಿತಿ ನೀಡಿದರು. ಭೂಮಿಕಾ ಹಾಗೂ ಅನೇಕ ಹಿರಿಯ ಸ್ವಯಂ ಸೇವಕರು ಸಹಕಾರ ನೀಡಿದರು.

ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್, ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್, ಘಟಕದ ನಾಯಕರಾದ ಸುದರ್ಶನ ನಾಯಕ್ ಹಾಗೂ ದಕ್ಷಾ ಉಪಸ್ಥಿತರಿದ್ದರು.

ಸ್ವಯಂ ಸೇವಕ ಆದಿತ್ಯ ನಿರೂಪಿಸಿ , ವಂದಿಸಿದರು.

Related posts

ಕುಮಟಾ ಸದ್ಗುರು ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಚಾರಣೆ: ಮಂಗಳೂರು ಶಾಸಕ ಡಾ.ಭರತ್ ಶೆಟ್ಟಿಯವರಿಂದ ಪಾದುಕ ಪೂಜೆ

Suddi Udaya

ಬೆಳ್ತಂಗಡಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ಪುದುವೆಟ್ಟು ವಿ. ಹಿಂ. ಪ. ಭಜರಂಗದಳ ವತಿಯಿಂದ ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಉಜಿರೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ಉಜಿರೆ ಗ್ರಾ.ಪಂ.ಯಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯ ಅನುಷ್ಠಾನದ ಅಧ್ಯಯನ ಪ್ರವಾಸ

Suddi Udaya

ಫೆ.1-5: ನಿಟ್ಟಡೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 9ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya
error: Content is protected !!