25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಮರಗಳು ಉರುಳಿ ಎರಡು ಗಂಟೆ ಟ್ರಾಫಿಕ್ ಜಾಮ್- ವಾಹನ ಸವಾರರ ಪರದಾಟ- ಮರಗಳು ತೆರವು

ಬೆಳ್ತಂಗಡಿ: ಇಂದು ಮಧ್ಯಾಹ್ನ ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಮೂರು ಮರಗಳು ಉರುಳಿ ಬಿದ್ದು ಸುಮಾರು ಎರಡು ತಾಸಿಗಿಂತ ಅಧಿಕ ಸಮಯ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಪರದಾಟ ನಡೆಸಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಭಾರಿ ಮಳೆಯಾಗಿದ್ದು ಮಧ್ಯಾಹ್ನ ಮಳೆಯೊಂದಿಗೆ ಬೀಸಿದ ಗಾಳಿಗೆ ಚಾರ್ಮಾಡಿ ಘಾಟಿಯ 8ನೇ ತಿರುವಿನಲ್ಲಿ ಬೃಹತ್ ಗಾತ್ರದ ಮರ,ಸಮೀಪದ ಇನ್ನೆರಡು ಮರಗಳೊಂದಿಗೆ ರಸ್ತೆಗೆ ಉರುಳಿ ಬಿತ್ತು.

ಇದರಿಂದ ಘಾಟಿ ಪ್ರದೇಶದಲ್ಲಿ ಸುಮಾರು 2 ಗಂಟೆಗಿಂತ ಅಧಿಕ ಸಮಯ ಟ್ರಾಫಿಕ್ ಜಾಮ್ ಉಂಟಾಯಿತು. ಘಾಟಿಯ ಇಕ್ಕೆಲಗಳಲ್ಲಿ ನಾಲ್ಕಾರು ಕಿಲೋಮೀಟರ್ ದೂರದವರೆಗೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮಾಹಿತಿ ಪಡೆದ ಧರ್ಮಸ್ಥಳ ಪೊಲೀಸರು,ಅರಣ್ಯ ಇಲಾಖೆ,ಚಾರ್ಮಾಡಿ ಹಸನಬ್ಬ ಮತ್ತು ತಂಡ, ಇಸ್ಮಾಯಿಲ್, ಮುಬಶೀರ್ ಪ್ರಜ್ವಲ್, ಕೆವಿ.ಗೌಡ ಹಾಗೂ ಸ್ಥಳೀಯರು ಸ್ಥಳಕ್ಕೆ ತೆರಳಿ ನಿರಂತರ ಕಾರ್ಯಾಚರಣೆ ನಡೆಸಿ ಮರಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು.

Related posts

ಕಳಸ ನದಿಯಲ್ಲಿ ಮುಳುಗಿದ ಯುವಕನ ದೇಹ ಪತ್ತೆ; ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು

Suddi Udaya

ಧರ್ಮಸ್ಥಳ: ಮುಳಿಕ್ಕಾರ್ ಭಾರಿ ಗಾಳಿ ಮಳೆಗೆ ಹಾನಿಯಾದ ಮನೆಗೆ ಧರ್ಮಸ್ಥಳ ಗ್ರಾ.ಪಂ. ನಿಂದ ಆರ್ಥಿಕ ನೆರವು

Suddi Udaya

ಉಜಿರೆ ಪೇಟೆಯಲ್ಲಿ ಪಾರ್ಕಿಂಗ್ ಸುವ್ಯವಸ್ಥೆ ಕುರಿತು ಸಭೆ

Suddi Udaya

ನಾಗೇಶ್ ಕುಮಾರ್ ಗೌಡ ರವರ ಅಭಿಮಾನಿ ಬಳಗದಿಂದ ಮಂಗಳೂರಿನ ಸಮಾಜ ಸೇವಕ ಪ್ರಮೋದ್ ಸಾಲಿಯಾನ್ ಬಲ್ಲಾಳ್ ಬಾಗ್ ಭೇಟಿ

Suddi Udaya

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

Suddi Udaya

ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿಯ ಶಶಿಕಾಂತ್ ರವರ ವಿಶೇಷ ಸಾಧನೆ: ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

Suddi Udaya
error: Content is protected !!