September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಮರಗಳು ಉರುಳಿ ಎರಡು ಗಂಟೆ ಟ್ರಾಫಿಕ್ ಜಾಮ್- ವಾಹನ ಸವಾರರ ಪರದಾಟ- ಮರಗಳು ತೆರವು

ಬೆಳ್ತಂಗಡಿ: ಇಂದು ಮಧ್ಯಾಹ್ನ ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಮೂರು ಮರಗಳು ಉರುಳಿ ಬಿದ್ದು ಸುಮಾರು ಎರಡು ತಾಸಿಗಿಂತ ಅಧಿಕ ಸಮಯ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಪರದಾಟ ನಡೆಸಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಭಾರಿ ಮಳೆಯಾಗಿದ್ದು ಮಧ್ಯಾಹ್ನ ಮಳೆಯೊಂದಿಗೆ ಬೀಸಿದ ಗಾಳಿಗೆ ಚಾರ್ಮಾಡಿ ಘಾಟಿಯ 8ನೇ ತಿರುವಿನಲ್ಲಿ ಬೃಹತ್ ಗಾತ್ರದ ಮರ,ಸಮೀಪದ ಇನ್ನೆರಡು ಮರಗಳೊಂದಿಗೆ ರಸ್ತೆಗೆ ಉರುಳಿ ಬಿತ್ತು.

ಇದರಿಂದ ಘಾಟಿ ಪ್ರದೇಶದಲ್ಲಿ ಸುಮಾರು 2 ಗಂಟೆಗಿಂತ ಅಧಿಕ ಸಮಯ ಟ್ರಾಫಿಕ್ ಜಾಮ್ ಉಂಟಾಯಿತು. ಘಾಟಿಯ ಇಕ್ಕೆಲಗಳಲ್ಲಿ ನಾಲ್ಕಾರು ಕಿಲೋಮೀಟರ್ ದೂರದವರೆಗೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮಾಹಿತಿ ಪಡೆದ ಧರ್ಮಸ್ಥಳ ಪೊಲೀಸರು,ಅರಣ್ಯ ಇಲಾಖೆ,ಚಾರ್ಮಾಡಿ ಹಸನಬ್ಬ ಮತ್ತು ತಂಡ, ಇಸ್ಮಾಯಿಲ್, ಮುಬಶೀರ್ ಪ್ರಜ್ವಲ್, ಕೆವಿ.ಗೌಡ ಹಾಗೂ ಸ್ಥಳೀಯರು ಸ್ಥಳಕ್ಕೆ ತೆರಳಿ ನಿರಂತರ ಕಾರ್ಯಾಚರಣೆ ನಡೆಸಿ ಮರಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು.

Related posts

ಉಜಿರೆ : ಸಹಕಾರ ಸಂಘದ ಅಧ್ಯಕ್ಷ ಇಚ್ಚಿಲ ಸುಂದರ ಗೌಡ ನಿಧನ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದಿಂದ ಕಿರಣ್ ಚಂದ್ರ ಪುಷ್ಪಗಿರಿ ರವರ ಭೇಟಿ

Suddi Udaya

ಮಡಂತ್ಯಾರು : ಕುಕ್ಕಳದಲ್ಲಿ ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

Suddi Udaya

ಬಂದಾರು: ಬೈಹುಲ್ಲು ಸಾಗಾಟದ ಲಾರಿಗೆ ಬೆಂಕಿ

Suddi Udaya
error: Content is protected !!