July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಮರಗಳು ಉರುಳಿ ಎರಡು ಗಂಟೆ ಟ್ರಾಫಿಕ್ ಜಾಮ್- ವಾಹನ ಸವಾರರ ಪರದಾಟ- ಮರಗಳು ತೆರವು

ಬೆಳ್ತಂಗಡಿ: ಇಂದು ಮಧ್ಯಾಹ್ನ ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಮೂರು ಮರಗಳು ಉರುಳಿ ಬಿದ್ದು ಸುಮಾರು ಎರಡು ತಾಸಿಗಿಂತ ಅಧಿಕ ಸಮಯ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಪರದಾಟ ನಡೆಸಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಭಾರಿ ಮಳೆಯಾಗಿದ್ದು ಮಧ್ಯಾಹ್ನ ಮಳೆಯೊಂದಿಗೆ ಬೀಸಿದ ಗಾಳಿಗೆ ಚಾರ್ಮಾಡಿ ಘಾಟಿಯ 8ನೇ ತಿರುವಿನಲ್ಲಿ ಬೃಹತ್ ಗಾತ್ರದ ಮರ,ಸಮೀಪದ ಇನ್ನೆರಡು ಮರಗಳೊಂದಿಗೆ ರಸ್ತೆಗೆ ಉರುಳಿ ಬಿತ್ತು.

ಇದರಿಂದ ಘಾಟಿ ಪ್ರದೇಶದಲ್ಲಿ ಸುಮಾರು 2 ಗಂಟೆಗಿಂತ ಅಧಿಕ ಸಮಯ ಟ್ರಾಫಿಕ್ ಜಾಮ್ ಉಂಟಾಯಿತು. ಘಾಟಿಯ ಇಕ್ಕೆಲಗಳಲ್ಲಿ ನಾಲ್ಕಾರು ಕಿಲೋಮೀಟರ್ ದೂರದವರೆಗೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮಾಹಿತಿ ಪಡೆದ ಧರ್ಮಸ್ಥಳ ಪೊಲೀಸರು,ಅರಣ್ಯ ಇಲಾಖೆ,ಚಾರ್ಮಾಡಿ ಹಸನಬ್ಬ ಮತ್ತು ತಂಡ, ಇಸ್ಮಾಯಿಲ್, ಮುಬಶೀರ್ ಪ್ರಜ್ವಲ್, ಕೆವಿ.ಗೌಡ ಹಾಗೂ ಸ್ಥಳೀಯರು ಸ್ಥಳಕ್ಕೆ ತೆರಳಿ ನಿರಂತರ ಕಾರ್ಯಾಚರಣೆ ನಡೆಸಿ ಮರಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು.

Related posts

ಸಮಾಜ ಸೇವಾ ಟ್ರಸ್ಟ್ ಸಂಸ್ಥಾಪಕ ರವಿ ಕಕ್ಕೆಪದವು ಹಾಗೂ ಸುಬ್ರಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸದಸ್ಯರಿಂದ ಸುಬ್ರಹ್ಮಣ್ಯದ ಕುಮಾರಧಾರ ವೆಂಟೆಡ್ ಡ್ಯಾಮ್ ಬಳಿ ಸ್ವಚ್ಛತಾ ಕಾರ್ಯ

Suddi Udaya

ಉಜಿರೆಯಲ್ಲಿ ರೈತ ತರಬೇತಿ ಕಾರ್ಯಕ್ರಮ

Suddi Udaya

ಡಿ. 29 : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಟ್ಟಡ ಅರಸಿನಮಕ್ಕಿಯಲ್ಲಿ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ತೋರಿಸಿ ಬೆದರಿಕೆಯೊಡ್ಡಿದ ಆರೋಪ, ಆನಂದ ಆಚಾರ್ಯ ಎಂಬಾತನ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ 

Suddi Udaya
error: Content is protected !!