23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ಜಮಾಬಂದಿ: ವಿವಿಧ ಯೋಜನೆಗಳಲ್ಲಿ ಶೇ 98.07 – 15ನೇ ಹಣಕಾಸು ಯೋಜನೆಯಲ್ಲಿ ಶೇ 67.14 ಪ್ರಗತಿ

ಬೆಳ್ತಂಗಡಿ: ದ.ಕ.ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ ಇದರ 2022-23 ನೇ ಸಾಲಿನ ವಾರ್ಷಿಕ ಜಮಾಬಂದಿ ಕಾರ್ಯಕ್ರಮ ಸೆ.30 ರಂದು ನೋಡೆಲ್ ಅಧಿಕಾರಿ ದ.ಕ ಜಿಲ್ಲಾ ಪಂಚಾಯತದ ಮುಖ್ಯ ಯೋಜನಾಧಿಕಾರಿ ಸಂಧ್ಯಾ ಕೆ.ಎಸ್ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರಗಿತು.


ಸಭೆಯಲ್ಲಿ ಕಳೆದ ಮಾರ್ಚ್-2023ರವರೆಗಿನ ತಾಲೂಕು ಪಂಚಾಯತಿ ಬೆಳ್ತಂಗಡಿಯ ವಿವಿಧ ಯೋಜನೆಗಳ ಪ್ರಗತಿ ವರದಿ ಹಾಗೂ ತಾಲೂಕು ಪಂಚಾಯತಿಯ 15ನೇ ಹಣಕಾಸು ಯೋಜನೆಯ ಪ್ರಗತಿ ವರದಿ ಬಗ್ಗೆ ನೋಡೆಲ್ ಅಧಿಕಾರಿಯವರು ಪರಿಶೀಲನೆ ನಡೆಸಿದರು. ವಿವಿಧ ಯೋಜನೆಗಳಲ್ಲಿ ಶೇ 98.07 ಸಾಧನೆ ಹಾಗೂ 15ನೇ ಹಣಕಾಸು ಯೋಜನೆಯಲ್ಲಿ ಶೇ 97.14 ಪ್ರಗತಿ ಸಾಧಿಸಲಾಗಿದೆ ಎಂದು ಸಭೆಗೆ ತಿಳಿಸಲಾಯಿತು.


ವೇದಿಕೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಬಿ.ಕುಸುಮಾಧರ, ಸಹಾಯಕ ಕಾರ್ಯಪಾಲ ಅಭಿಯಂತರ ನಿತಿನ್ ಉಪಸ್ಥಿತರಿದ್ದರು.


ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲೂಕು ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು, ತಾಲೂಕು ಪಂಚಾಯತ್ ಲೆಕ್ಕ ಸಹಾಯಕ ಗಣೇಶ್ ಪೂಜಾರಿ ಸ್ವಾಗತಿಸಿದರು. ತಾ.ಪಂ ವ್ಯವಸ್ಥಾಪಕ ಪ್ರಶಾಂತ್ ಡಿ., ಕಚೇರಿಯ ಅಶೋಕ ದೇವಾಡಿಗ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಮತದಾನ ಕೇಂದ್ರಗಳಿಗೆ ಭೇಟಿ

Suddi Udaya

ಬೆಳ್ತಂಗಡಿ: ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ

Suddi Udaya

ಪೆರಿಂಜೆ : ಮಿಲಾದ್ ಆಚರಣೆಯ ಪ್ರಯುಕ್ತ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮ

Suddi Udaya

ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕ “ಅಗ್ರಿಲೀಫ್ 2.0” ಉದ್ಘಾಟನೆ

Suddi Udaya

ಫೆ.7-10: ಶ್ರೀ ಕ್ಷೇತ್ರ ಒಟ್ಲದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡಕ್ಕೆ ದ್ವಿತೀಯ ಸಮಗ್ರ ಪ್ರಶಸ್ತಿ

Suddi Udaya
error: Content is protected !!