May 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಶ್ರೀ ಕ್ಷೇ.ಧ. ಗ್ರಾ. ಯೋಜನೆ ತಾಲೂಕು ಮಹಿಳಾ ಜ್ಞಾನವಿಕಾಸ ನೇತೃತ್ವದ್ಲಲಿ ಸೃಜನಶೀಲ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಸೃಜನಶೀಲ ಕಾರ್ಯಕ್ರಮವನ್ನು ನಡೆಸಲಾಯಿತು. ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿ ಸುರೇಂದ್ರ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ವಉದ್ಯೋಗವನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಜ್ಞಾನವಿಕಾಸ ಕೇಂದ್ರದಲ್ಲಿರುವ 10 ಕುಟುಂಬವನ್ನು ಆಯ್ಕೆ ಮಾಡಿಕೊಂಡು ಪ್ರತಿಯೊಂದು ಕುಟುಂಬಕ್ಕೆ 25 ಮಲ್ಲಿಗೆ ಗಿಡವನ್ನು ಉಚಿತವಾಗಿ ನೀಡಿದರು.

ಮಲ್ಲಿಗೆ ಕೃಷಿಯಿಂದ ಹಲವಾರು ಮಂದಿ ಜೀವನ ನಡೆಸುತ್ತಿದ್ದು ಕಾರ್ಯಕ್ರಮದ ಸದುಪಯೋಗ ವನ್ನು ಪಡೆಯುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಮಲ್ಲಿಗೆ ಗಿಡ ನಾಟಿ ಮತ್ತು ನಿರ್ವಹಣೆ ಬಗ್ಗೆ ಕೃಷಿಕರಾದ ಲಿಂಗಪ್ಪಗೌಡ ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾಹಿತಿಯನ್ನು ನೀಡಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿರಿಯಾಳರವರು ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಮೇಲ್ವಿಚಾರಕರಾದ ಸುಶಾಂತ್ ರವರು, ಜ್ಞಾನವಿಕಾಸ ಸಮನ್ವಯಧಿಕಾರಿಯಾದ ಮಧುರಾರವರು, ಸೇವಾಪ್ರತಿನಿಧಿ ಗೀತಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಕೇಂದ್ರದ ಸದಸ್ಯರು ಯೋಜನೆಯ ಫಲಾನುಭವಿಗಳು ಉಪಸ್ಥಿತರಿದ್ದು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.

Related posts

ನಾರಾವಿ ಅಂತರ್ ಕಾಲೇಜು ವಾಣಿಜ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ :ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

Suddi Udaya

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವದ ಸಮಿತಿ ರಚನೆ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya

ಧರ್ಮಸ್ಥಳ : ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ಹಾಗೂ ರೈತರಿಗೆ ಮತ್ತು ಕೃಷಿಯಂತ್ರಧಾರಾ ಕೇಂದ್ರಗಳಿಗೆ ಕೃಷಿ ಯಂತ್ರೋಪಕರಣಗಳ ಹಸ್ತಾಂತರ

Suddi Udaya

ಬೆಳ್ತಂಗಡಿ: ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯಿಂದ ಆಟಿ ಕೂಟ ಆಚರಣೆ: ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಮಹನೀಯರಿಗೆ ವಿವಿಧ ಸ್ಪರ್ಧೆಗಳು

Suddi Udaya
error: Content is protected !!