September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ರಾ.ಸೇ ಯೋಜನೆಯ ವಿಶೇಷ ಕಾರ್ಯಾಗಾರ ಉದ್ಘಾಟನೆ

ಉಜಿರೆ : ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಭಾಗವಹಿಸುವ ಅವಕಾಶ ಪಡೆಯುವುದು ಮಾತ್ರವಲ್ಲ ನಾವು ಅದರಲ್ಲಿ ಹೇಗೆ ತೊಡಗಿಸಿಕೊಂಡಿದ್ದೇನೆ , ನನ್ನ ವ್ಯಕ್ತಿತ್ವಕ್ಕೆ ಯಾವ ವಿಷಯಗಳನ್ನು ಪಡೆದುಕೊಂಡಿದ್ದೇವೆ ಎನ್ನುವುದು ಮುಖ್ಯ. ಹೊಂದಾಣಿಕೆಯ ಜೀವನ , ಪರಸ್ಪರ ತಿಳುವಳಿಕೆ ಇತ್ಯಾದಿಗಳಿಗೆ ರಾ.ಸೇ ಯೋಜನೆಯ ಶಿಬಿರಗಳು ಪೂರಕ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಅವರು ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ನಡೆದ ಒಂದು ದಿನದ ವಿಶೇಷ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಆನಂತರ ನಡೆದ ಕಾರ್ಯಾಗಾರದಲ್ಲಿ ಹಿರಿಯ ಸ್ವಯಂ ಸೇವಕರಾದ ಧನುಷ್ ಕೆ.ಪಿ , ಶಶಿಕಿರಣ್ ಹಾಗೂ ಉಜಿರೆ ಶ್ರೀ ಧ.ಮಂ ಪದವಿ ಕಾಲೇಜಿನ ರಾ.ಸೇ ಯೋಜನೆಯ ಸ್ವಯಂ ಸೇವಕರಾದ ನಿಸರ್ಗ ಹಾಗೂ ಯಕ್ಷಿತ್ ಅವರು ವರದಿ ತಯಾರಿಕೆ, ಸಿಂಚನಾ ಅವರು ಕಾರ್ಯಕ್ರಮ ನಿರ್ವಹಣೆ ಬಗ್ಗೆ, ಅನಂತ್ ಅವರು ಭಿತ್ತಿಪತ್ರಿಕೆ ಬಗ್ಗೆ ಮಾಹಿತಿ ನೀಡಿದರು. ಭೂಮಿಕಾ ಹಾಗೂ ಅನೇಕ ಹಿರಿಯ ಸ್ವಯಂ ಸೇವಕರು ಸಹಕಾರ ನೀಡಿದರು.

ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್, ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್, ಘಟಕದ ನಾಯಕರಾದ ಸುದರ್ಶನ ನಾಯಕ್ ಹಾಗೂ ದಕ್ಷಾ ಉಪಸ್ಥಿತರಿದ್ದರು.

ಸ್ವಯಂ ಸೇವಕ ಆದಿತ್ಯ ನಿರೂಪಿಸಿ , ವಂದಿಸಿದರು.

Related posts

ಬೆಳಾಲು-ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ವರ್ತಕರ ಸಂಘದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಆಶ್ರಯದಲ್ಲಿ ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಫೆ.12: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ. ಪೂ. ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್

Suddi Udaya
error: Content is protected !!