22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ರಾ.ಸೇ ಯೋಜನೆಯ ವಿಶೇಷ ಕಾರ್ಯಾಗಾರ ಉದ್ಘಾಟನೆ

ಉಜಿರೆ : ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಭಾಗವಹಿಸುವ ಅವಕಾಶ ಪಡೆಯುವುದು ಮಾತ್ರವಲ್ಲ ನಾವು ಅದರಲ್ಲಿ ಹೇಗೆ ತೊಡಗಿಸಿಕೊಂಡಿದ್ದೇನೆ , ನನ್ನ ವ್ಯಕ್ತಿತ್ವಕ್ಕೆ ಯಾವ ವಿಷಯಗಳನ್ನು ಪಡೆದುಕೊಂಡಿದ್ದೇವೆ ಎನ್ನುವುದು ಮುಖ್ಯ. ಹೊಂದಾಣಿಕೆಯ ಜೀವನ , ಪರಸ್ಪರ ತಿಳುವಳಿಕೆ ಇತ್ಯಾದಿಗಳಿಗೆ ರಾ.ಸೇ ಯೋಜನೆಯ ಶಿಬಿರಗಳು ಪೂರಕ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಅವರು ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ನಡೆದ ಒಂದು ದಿನದ ವಿಶೇಷ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಆನಂತರ ನಡೆದ ಕಾರ್ಯಾಗಾರದಲ್ಲಿ ಹಿರಿಯ ಸ್ವಯಂ ಸೇವಕರಾದ ಧನುಷ್ ಕೆ.ಪಿ , ಶಶಿಕಿರಣ್ ಹಾಗೂ ಉಜಿರೆ ಶ್ರೀ ಧ.ಮಂ ಪದವಿ ಕಾಲೇಜಿನ ರಾ.ಸೇ ಯೋಜನೆಯ ಸ್ವಯಂ ಸೇವಕರಾದ ನಿಸರ್ಗ ಹಾಗೂ ಯಕ್ಷಿತ್ ಅವರು ವರದಿ ತಯಾರಿಕೆ, ಸಿಂಚನಾ ಅವರು ಕಾರ್ಯಕ್ರಮ ನಿರ್ವಹಣೆ ಬಗ್ಗೆ, ಅನಂತ್ ಅವರು ಭಿತ್ತಿಪತ್ರಿಕೆ ಬಗ್ಗೆ ಮಾಹಿತಿ ನೀಡಿದರು. ಭೂಮಿಕಾ ಹಾಗೂ ಅನೇಕ ಹಿರಿಯ ಸ್ವಯಂ ಸೇವಕರು ಸಹಕಾರ ನೀಡಿದರು.

ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್, ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್, ಘಟಕದ ನಾಯಕರಾದ ಸುದರ್ಶನ ನಾಯಕ್ ಹಾಗೂ ದಕ್ಷಾ ಉಪಸ್ಥಿತರಿದ್ದರು.

ಸ್ವಯಂ ಸೇವಕ ಆದಿತ್ಯ ನಿರೂಪಿಸಿ , ವಂದಿಸಿದರು.

Related posts

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ : ವೀಲ್ ಚೇರ್ ಹಸ್ತಾಂತರ

Suddi Udaya

ನಿಡ್ಲೆ ಬೂತ್ ಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಭೇಟಿ

Suddi Udaya

ಬಳಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ತಾಲೂಕಿನಲ್ಲಿ ಗುಡುಗು ಸಹಿತ ಗಾಳಿ ಮಳೆ ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

Suddi Udaya

ನ.10: ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ

Suddi Udaya
error: Content is protected !!