38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಮರಗಳು ಉರುಳಿ ಎರಡು ಗಂಟೆ ಟ್ರಾಫಿಕ್ ಜಾಮ್- ವಾಹನ ಸವಾರರ ಪರದಾಟ- ಮರಗಳು ತೆರವು

ಬೆಳ್ತಂಗಡಿ: ಇಂದು ಮಧ್ಯಾಹ್ನ ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಮೂರು ಮರಗಳು ಉರುಳಿ ಬಿದ್ದು ಸುಮಾರು ಎರಡು ತಾಸಿಗಿಂತ ಅಧಿಕ ಸಮಯ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಪರದಾಟ ನಡೆಸಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಭಾರಿ ಮಳೆಯಾಗಿದ್ದು ಮಧ್ಯಾಹ್ನ ಮಳೆಯೊಂದಿಗೆ ಬೀಸಿದ ಗಾಳಿಗೆ ಚಾರ್ಮಾಡಿ ಘಾಟಿಯ 8ನೇ ತಿರುವಿನಲ್ಲಿ ಬೃಹತ್ ಗಾತ್ರದ ಮರ,ಸಮೀಪದ ಇನ್ನೆರಡು ಮರಗಳೊಂದಿಗೆ ರಸ್ತೆಗೆ ಉರುಳಿ ಬಿತ್ತು.

ಇದರಿಂದ ಘಾಟಿ ಪ್ರದೇಶದಲ್ಲಿ ಸುಮಾರು 2 ಗಂಟೆಗಿಂತ ಅಧಿಕ ಸಮಯ ಟ್ರಾಫಿಕ್ ಜಾಮ್ ಉಂಟಾಯಿತು. ಘಾಟಿಯ ಇಕ್ಕೆಲಗಳಲ್ಲಿ ನಾಲ್ಕಾರು ಕಿಲೋಮೀಟರ್ ದೂರದವರೆಗೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮಾಹಿತಿ ಪಡೆದ ಧರ್ಮಸ್ಥಳ ಪೊಲೀಸರು,ಅರಣ್ಯ ಇಲಾಖೆ,ಚಾರ್ಮಾಡಿ ಹಸನಬ್ಬ ಮತ್ತು ತಂಡ, ಇಸ್ಮಾಯಿಲ್, ಮುಬಶೀರ್ ಪ್ರಜ್ವಲ್, ಕೆವಿ.ಗೌಡ ಹಾಗೂ ಸ್ಥಳೀಯರು ಸ್ಥಳಕ್ಕೆ ತೆರಳಿ ನಿರಂತರ ಕಾರ್ಯಾಚರಣೆ ನಡೆಸಿ ಮರಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ ಹೂವಿನ ವ್ಯಾಪಾರಿ ಶಿವರಾಮ್ ರವರಿಗೆ ಆರ್ಥಿಕ ಸಹಾಯ

Suddi Udaya

ಕೊಕ್ಕಡ ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕದ ನೂತನ ಪದಾಧಿಕಾರಿಗಳ ರಚನೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಪ್ರೌಢಶಾಲೆ ಮಂಜೂರುಗೊಳಿಸುವಂತೆ ವಿನುತ ಬಂಗೇರ ರವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಕೋಶಾಧಿಕಾರಿಯಾಗಿ ಚೇತನ್ ಕೆಂಗುಡೇಲು

Suddi Udaya
error: Content is protected !!