22.6 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಮರಗಳು ಉರುಳಿ ಎರಡು ಗಂಟೆ ಟ್ರಾಫಿಕ್ ಜಾಮ್- ವಾಹನ ಸವಾರರ ಪರದಾಟ- ಮರಗಳು ತೆರವು

ಬೆಳ್ತಂಗಡಿ: ಇಂದು ಮಧ್ಯಾಹ್ನ ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಮೂರು ಮರಗಳು ಉರುಳಿ ಬಿದ್ದು ಸುಮಾರು ಎರಡು ತಾಸಿಗಿಂತ ಅಧಿಕ ಸಮಯ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಪರದಾಟ ನಡೆಸಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಭಾರಿ ಮಳೆಯಾಗಿದ್ದು ಮಧ್ಯಾಹ್ನ ಮಳೆಯೊಂದಿಗೆ ಬೀಸಿದ ಗಾಳಿಗೆ ಚಾರ್ಮಾಡಿ ಘಾಟಿಯ 8ನೇ ತಿರುವಿನಲ್ಲಿ ಬೃಹತ್ ಗಾತ್ರದ ಮರ,ಸಮೀಪದ ಇನ್ನೆರಡು ಮರಗಳೊಂದಿಗೆ ರಸ್ತೆಗೆ ಉರುಳಿ ಬಿತ್ತು.

ಇದರಿಂದ ಘಾಟಿ ಪ್ರದೇಶದಲ್ಲಿ ಸುಮಾರು 2 ಗಂಟೆಗಿಂತ ಅಧಿಕ ಸಮಯ ಟ್ರಾಫಿಕ್ ಜಾಮ್ ಉಂಟಾಯಿತು. ಘಾಟಿಯ ಇಕ್ಕೆಲಗಳಲ್ಲಿ ನಾಲ್ಕಾರು ಕಿಲೋಮೀಟರ್ ದೂರದವರೆಗೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮಾಹಿತಿ ಪಡೆದ ಧರ್ಮಸ್ಥಳ ಪೊಲೀಸರು,ಅರಣ್ಯ ಇಲಾಖೆ,ಚಾರ್ಮಾಡಿ ಹಸನಬ್ಬ ಮತ್ತು ತಂಡ, ಇಸ್ಮಾಯಿಲ್, ಮುಬಶೀರ್ ಪ್ರಜ್ವಲ್, ಕೆವಿ.ಗೌಡ ಹಾಗೂ ಸ್ಥಳೀಯರು ಸ್ಥಳಕ್ಕೆ ತೆರಳಿ ನಿರಂತರ ಕಾರ್ಯಾಚರಣೆ ನಡೆಸಿ ಮರಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು.

Related posts

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

Suddi Udaya

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಹಾ ಯೋಜನೆ: ಬೆಳ್ತಂಗಡಿ ಪಟ್ಟಣ ಪಂಚಾಯತನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಯೋಜನೆಯ ನಿಯಮಗಳನ್ನು ಅನ್ವಯಿಸದಂತೆ ಕ್ರಮ ತೆಗೆದುಕೊಳ್ಳಲು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಆಗ್ರಹ: ನಗರಾಭಿವೃದ್ದಿ ಸಚಿವರಿಂದ ಸಕಾರಾತ್ಮಕವಾಗಿ ಸ್ಪಂದನೆ ಸಮಸ್ಯೆ ಪರಿಹರಿಸುವ ಭರವಸೆ

Suddi Udaya

ನ.20: ಚಾರ್ಮಾಡಿಯಲ್ಲಿ ಸಹಕಾರ ಸಪ್ತಾಹ ಸಮಾರೋಪ

Suddi Udaya

ಡಿ.26 ವಿದ್ಯುತ್ ನಿಲುಗಡೆ

Suddi Udaya
error: Content is protected !!