July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಮರಗಳು ಉರುಳಿ ಎರಡು ಗಂಟೆ ಟ್ರಾಫಿಕ್ ಜಾಮ್- ವಾಹನ ಸವಾರರ ಪರದಾಟ- ಮರಗಳು ತೆರವು

ಬೆಳ್ತಂಗಡಿ: ಇಂದು ಮಧ್ಯಾಹ್ನ ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಮೂರು ಮರಗಳು ಉರುಳಿ ಬಿದ್ದು ಸುಮಾರು ಎರಡು ತಾಸಿಗಿಂತ ಅಧಿಕ ಸಮಯ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಪರದಾಟ ನಡೆಸಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಭಾರಿ ಮಳೆಯಾಗಿದ್ದು ಮಧ್ಯಾಹ್ನ ಮಳೆಯೊಂದಿಗೆ ಬೀಸಿದ ಗಾಳಿಗೆ ಚಾರ್ಮಾಡಿ ಘಾಟಿಯ 8ನೇ ತಿರುವಿನಲ್ಲಿ ಬೃಹತ್ ಗಾತ್ರದ ಮರ,ಸಮೀಪದ ಇನ್ನೆರಡು ಮರಗಳೊಂದಿಗೆ ರಸ್ತೆಗೆ ಉರುಳಿ ಬಿತ್ತು.

ಇದರಿಂದ ಘಾಟಿ ಪ್ರದೇಶದಲ್ಲಿ ಸುಮಾರು 2 ಗಂಟೆಗಿಂತ ಅಧಿಕ ಸಮಯ ಟ್ರಾಫಿಕ್ ಜಾಮ್ ಉಂಟಾಯಿತು. ಘಾಟಿಯ ಇಕ್ಕೆಲಗಳಲ್ಲಿ ನಾಲ್ಕಾರು ಕಿಲೋಮೀಟರ್ ದೂರದವರೆಗೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮಾಹಿತಿ ಪಡೆದ ಧರ್ಮಸ್ಥಳ ಪೊಲೀಸರು,ಅರಣ್ಯ ಇಲಾಖೆ,ಚಾರ್ಮಾಡಿ ಹಸನಬ್ಬ ಮತ್ತು ತಂಡ, ಇಸ್ಮಾಯಿಲ್, ಮುಬಶೀರ್ ಪ್ರಜ್ವಲ್, ಕೆವಿ.ಗೌಡ ಹಾಗೂ ಸ್ಥಳೀಯರು ಸ್ಥಳಕ್ಕೆ ತೆರಳಿ ನಿರಂತರ ಕಾರ್ಯಾಚರಣೆ ನಡೆಸಿ ಮರಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು.

Related posts

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ತುಳು ಸಂಸ್ಕೃತಿ ಕುರಿತ ‘ಐಸಿರ’ ಕಾರ್ಯಕ್ರಮ

Suddi Udaya

ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ನೂತನ ಕೊಠಡಿಗೆ ಶಿಲಾನ್ಯಾಸ ಹಾಗೂ ವಿವೇಕ ಕೊಠಡಿ ಉದ್ಘಾಟನೆ

Suddi Udaya

ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಉಜಿರೆ ವಿದ್ಯುತ್ ಕಂಬಗಳ ಸ್ವಚ್ಚತಾ ಶ್ರಮದಾನ

Suddi Udaya

ಧರ್ಮಸ್ಥಳ : ಕಾರು ಬೈಕ್ ನಡುವೆ ಅಪಘಾತ

Suddi Udaya

ಸರಕಾರದಿಂದ 2024ರ ಸಾರ್ವತ್ರಿಕ ರಜೆ ದಿನ ಪ್ರಕಟ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳು ಜೆ ಇ ಇ ದ್ವಿತೀಯ ಸುತ್ತಿನಲ್ಲೂ ಅಮೋಘ ಸಾಧನೆ

Suddi Udaya
error: Content is protected !!