22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ಜಮಾಬಂದಿ: ವಿವಿಧ ಯೋಜನೆಗಳಲ್ಲಿ ಶೇ 98.07 – 15ನೇ ಹಣಕಾಸು ಯೋಜನೆಯಲ್ಲಿ ಶೇ 67.14 ಪ್ರಗತಿ

ಬೆಳ್ತಂಗಡಿ: ದ.ಕ.ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ ಇದರ 2022-23 ನೇ ಸಾಲಿನ ವಾರ್ಷಿಕ ಜಮಾಬಂದಿ ಕಾರ್ಯಕ್ರಮ ಸೆ.30 ರಂದು ನೋಡೆಲ್ ಅಧಿಕಾರಿ ದ.ಕ ಜಿಲ್ಲಾ ಪಂಚಾಯತದ ಮುಖ್ಯ ಯೋಜನಾಧಿಕಾರಿ ಸಂಧ್ಯಾ ಕೆ.ಎಸ್ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರಗಿತು.


ಸಭೆಯಲ್ಲಿ ಕಳೆದ ಮಾರ್ಚ್-2023ರವರೆಗಿನ ತಾಲೂಕು ಪಂಚಾಯತಿ ಬೆಳ್ತಂಗಡಿಯ ವಿವಿಧ ಯೋಜನೆಗಳ ಪ್ರಗತಿ ವರದಿ ಹಾಗೂ ತಾಲೂಕು ಪಂಚಾಯತಿಯ 15ನೇ ಹಣಕಾಸು ಯೋಜನೆಯ ಪ್ರಗತಿ ವರದಿ ಬಗ್ಗೆ ನೋಡೆಲ್ ಅಧಿಕಾರಿಯವರು ಪರಿಶೀಲನೆ ನಡೆಸಿದರು. ವಿವಿಧ ಯೋಜನೆಗಳಲ್ಲಿ ಶೇ 98.07 ಸಾಧನೆ ಹಾಗೂ 15ನೇ ಹಣಕಾಸು ಯೋಜನೆಯಲ್ಲಿ ಶೇ 97.14 ಪ್ರಗತಿ ಸಾಧಿಸಲಾಗಿದೆ ಎಂದು ಸಭೆಗೆ ತಿಳಿಸಲಾಯಿತು.


ವೇದಿಕೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಬಿ.ಕುಸುಮಾಧರ, ಸಹಾಯಕ ಕಾರ್ಯಪಾಲ ಅಭಿಯಂತರ ನಿತಿನ್ ಉಪಸ್ಥಿತರಿದ್ದರು.


ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲೂಕು ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು, ತಾಲೂಕು ಪಂಚಾಯತ್ ಲೆಕ್ಕ ಸಹಾಯಕ ಗಣೇಶ್ ಪೂಜಾರಿ ಸ್ವಾಗತಿಸಿದರು. ತಾ.ಪಂ ವ್ಯವಸ್ಥಾಪಕ ಪ್ರಶಾಂತ್ ಡಿ., ಕಚೇರಿಯ ಅಶೋಕ ದೇವಾಡಿಗ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಸೌಜನ್ಯ ಹತ್ಯೆ ಪ್ರಕರಣ: ನೈಜ‌ ಆರೋಪಿಗಳ ಪತ್ತೆ‌‌ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

Suddi Udaya

ಡಿ.17 : ರೆಖ್ಯ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದ ಹಾಗೂ ವಿಶ್ವ ಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೃಹತ್ ಪಾದಯಾತ್ರೆ

Suddi Udaya

ಏ.16-22: ಶ್ರೀ ಧ.ಮಂ. ಯೋಗ – ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ಕಳಸದಲ್ಲಿ 46ನೇ ಬೃಹತ್ ಬೇಸಿಗೆ ಯೋಗೋತ್ಸವ

Suddi Udaya

ಜೂ. 14: ಗೇರುಕಟ್ಟೆ ಎಂ. ಜನಾರ್ದನ ಪೂಜಾರಿ ಮತ್ತು ಕಮಲಾವತಿ ದಂಪತಿ ವೈವಾಹಿಕ ಜೀವನದ 70ರ ಸಂಭ್ರಮ

Suddi Udaya

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಭಾಟನೆ

Suddi Udaya
error: Content is protected !!