23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಶ್ರೀ ಕ್ಷೇ.ಧ. ಗ್ರಾ. ಯೋಜನೆ ತಾಲೂಕು ಮಹಿಳಾ ಜ್ಞಾನವಿಕಾಸ ನೇತೃತ್ವದ್ಲಲಿ ಸೃಜನಶೀಲ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಸೃಜನಶೀಲ ಕಾರ್ಯಕ್ರಮವನ್ನು ನಡೆಸಲಾಯಿತು. ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿ ಸುರೇಂದ್ರ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ವಉದ್ಯೋಗವನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಜ್ಞಾನವಿಕಾಸ ಕೇಂದ್ರದಲ್ಲಿರುವ 10 ಕುಟುಂಬವನ್ನು ಆಯ್ಕೆ ಮಾಡಿಕೊಂಡು ಪ್ರತಿಯೊಂದು ಕುಟುಂಬಕ್ಕೆ 25 ಮಲ್ಲಿಗೆ ಗಿಡವನ್ನು ಉಚಿತವಾಗಿ ನೀಡಿದರು.

ಮಲ್ಲಿಗೆ ಕೃಷಿಯಿಂದ ಹಲವಾರು ಮಂದಿ ಜೀವನ ನಡೆಸುತ್ತಿದ್ದು ಕಾರ್ಯಕ್ರಮದ ಸದುಪಯೋಗ ವನ್ನು ಪಡೆಯುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಮಲ್ಲಿಗೆ ಗಿಡ ನಾಟಿ ಮತ್ತು ನಿರ್ವಹಣೆ ಬಗ್ಗೆ ಕೃಷಿಕರಾದ ಲಿಂಗಪ್ಪಗೌಡ ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾಹಿತಿಯನ್ನು ನೀಡಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿರಿಯಾಳರವರು ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಮೇಲ್ವಿಚಾರಕರಾದ ಸುಶಾಂತ್ ರವರು, ಜ್ಞಾನವಿಕಾಸ ಸಮನ್ವಯಧಿಕಾರಿಯಾದ ಮಧುರಾರವರು, ಸೇವಾಪ್ರತಿನಿಧಿ ಗೀತಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಕೇಂದ್ರದ ಸದಸ್ಯರು ಯೋಜನೆಯ ಫಲಾನುಭವಿಗಳು ಉಪಸ್ಥಿತರಿದ್ದು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.

Related posts

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಸುಲ್ಕೇರಿ-ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಸುನಿಲ್ ಅಸೌಖ್ಯದಿಂದ ಮೃತ್ಯು

Suddi Udaya

ನಾವೂರು: ಮೋನಮ್ಮ ನಿಧನ

Suddi Udaya

ಅಳದಂಗಡಿಯ ಅನುಷಾ ಎಲ್ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುವದಿನಾಚರಣೆ

Suddi Udaya

ಎಸ್.ಡಿ.ಎಂ ಕಾಲೇಜು : ದೆಹಲಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗಿಯಾದ ಕೆಡೆಟ್ ಗಳಿಗೆ ಅಭಿನಂದನಾ ಸಮಾರಂಭ

Suddi Udaya
error: Content is protected !!