30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಸೇವಾ ಟ್ರಸ್ಟ್ ಇದರ ವತಿಯಿಂದ ತಾಲೂಕಿನ ಬಡಕುಟುಂಬದ ಪ್ರತಿಭಾನ್ವಿತ 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

ಬೆಳ್ತಂಗಡಿ : ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಸೇವಾ ಟ್ರಸ್ಟ್ ಇದರ ವತಿಯಿಂದ ತಾಲೂಕಿನ ಪ್ರತಿಭಾನ್ವಿತ 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಸೆ.30 ರಂದು ರೋಟರಿ ಸೇವಾ ಭವನ, ಅರಳಿ ರಸ್ತೆ, ಕಾಶಿಬೆಟ್ಟುವಿನಲ್ಲಿ ಜರುಗಿತು.


ಮುಖ್ಯ ಅತಿಥಿಗಳಾಗಿ ರೊ. ಕೃಷ್ಣ ಶೆಟ್ಟಿ ಕೆ., ಪಿಡಿಜಿ ಮತ್ತು ಜಿಲ್ಲಾ ಸಲಹೆಗಾರ, ARRFC, ವಿಧಾನ ಪರಿಷತ್ ಶಾಸಕ ರೊ. ಕೆ.ಪ್ರತಾಪಸಿಂಹ ನಾಯಕ್, ಪಡ್ವೆಟ್ನಾಯ ಫ್ಯಾಮಿಲಿ ಟ್ರಸ್ಟ್ ಉಜಿರೆ ಟ್ರಸ್ಟಿ, ಶ್ರೀಧರ ಪಡ್ವೆಟ್ನಾಯ, ರೊ. ರಂಜಿತ್ ಸಿಂಗ್ ಗುಲಾಟಿ, ಮಾಜಿ ಅಧ್ಯಕ್ಷರು, ರೋಟರಿ ಬೆಂಗಳೂರು ಇಂದಿರಾನಗರ, ಡಾ. ಎನ್. ಕೃಷ್ಣನ್ ಮೆನನ್, ಮಾಜಿ ಅಧ್ಯಕ್ಷ ರೋಟರಿ ಬೆಂಗಳೂರು ಇಂದಿರಾನಗರ, ರೊ. ಜಗದೀಶ್ ಎಂ., ನಿಕಟಪೂರ್ವ ಅಧ್ಯಕ್ಷ ರೋಟರಿ ಬೆಂಗಳೂರು, ಇಂದಿರಾನಗರ, ರೊ. ಯಶವಂತ್ ಪಟವರ್ಧನ್, ವಲಯ ಸೇನಾನಿ, ರೊ. ಡಾ. ಜಯ ಕುಮಾರ್ ಶೆಟ್ಟಿ, ಜಿಲ್ಲೆ. ಅಧ್ಯಕ್ಷರು, ಮೂಲ ಶಿಕ್ಷಣ ಮತ್ತು ಸಾಕ್ಷರತೆ, ರೊ. ಡಿ.ಎಂ.ಗೌಡ, ಕಾಯ೯ಕ್ರಮ ಸಂಯೋಜಕರು ರೋಟರಿ ಕ್ಲಬ್ ಬೆಳ್ತಂಗಡಿ, ರೊ. ಎನ್.ಬಾಲಕೃಷ್ಣನ್ ಅಧ್ಯಕ್ಷರು, ರೋಟರಿ ಬೆಂಗಳೂರು ಇಂದಿರಾನಗರ, ರೊ.ಎನ್. ಗೋಪಿನಾಥ್ ಕಾರ್ಯದರ್ಶಿ, ರೋಟರಿ ಬೆಂಗಳೂರು ಇಂದಿರಾನಗರ , ರೊ.ಮೇಜನರಲ್ (ನಿವೃತ್ತ) ಎಂ.ವಿ ಭಟ್, ಆನ್ಸ್ ಕ್ಲಬ್ ಅಧ್ಯಕ್ಷೆ ಅನಿತಾ ದಯಾಕರ್, ಬೆಳ್ತಂಗಡಿ ಪ.ಪೂ.ಕಾಲೇಜಿನ ಪ್ರಾಚಾರ್ಯ ಸುಕುಮಾರ್ ಉಪಸ್ಥಿತರಿದ್ದರು.


ರೊ. ಅನಂತ ಭಟ್ ಮಚ್ಚಿಮಲೆ ಅಧ್ಯಕ್ಷರು, ರೋಟರಿ ಕ್ಲಬ್ ಬೆಳ್ತಂಗಡಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ರೊ. ಧನಂಜಯ ರಾವ್ ಬಿ.ಕೆ ಕಾರ್ಯಕ್ರಮ ನಿರೂಪಿಸಿದರು. ರೊ.ವಿದ್ಯಾ ಕುಮಾರ್ ಕಾಂಚೋಡು ಕಾರ್ಯದರ್ಶಿ, ರೋಟರಿ ಕ್ಲಬ್ ಬೆಳ್ತಂಗಡಿ ಧನ್ಯವಾದವಿತ್ತರು.

Related posts

ಕಲ್ಮಂಜ: ಮಾಣಿಂಜೆ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳು : ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಕೊಡಗು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ವಿಧಾನ ಪರಿಷತ್ತಿನ ಶಾಸಕ ಪ್ರತಾಪ್ ಸಿಂಹ ನಾಯಕ್ ನೇಮಕ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಡಿ.10: ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

Suddi Udaya

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya
error: Content is protected !!