24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಸೇವಾ ಟ್ರಸ್ಟ್ ಇದರ ವತಿಯಿಂದ ತಾಲೂಕಿನ ಬಡಕುಟುಂಬದ ಪ್ರತಿಭಾನ್ವಿತ 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

ಬೆಳ್ತಂಗಡಿ : ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಸೇವಾ ಟ್ರಸ್ಟ್ ಇದರ ವತಿಯಿಂದ ತಾಲೂಕಿನ ಪ್ರತಿಭಾನ್ವಿತ 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಸೆ.30 ರಂದು ರೋಟರಿ ಸೇವಾ ಭವನ, ಅರಳಿ ರಸ್ತೆ, ಕಾಶಿಬೆಟ್ಟುವಿನಲ್ಲಿ ಜರುಗಿತು.


ಮುಖ್ಯ ಅತಿಥಿಗಳಾಗಿ ರೊ. ಕೃಷ್ಣ ಶೆಟ್ಟಿ ಕೆ., ಪಿಡಿಜಿ ಮತ್ತು ಜಿಲ್ಲಾ ಸಲಹೆಗಾರ, ARRFC, ವಿಧಾನ ಪರಿಷತ್ ಶಾಸಕ ರೊ. ಕೆ.ಪ್ರತಾಪಸಿಂಹ ನಾಯಕ್, ಪಡ್ವೆಟ್ನಾಯ ಫ್ಯಾಮಿಲಿ ಟ್ರಸ್ಟ್ ಉಜಿರೆ ಟ್ರಸ್ಟಿ, ಶ್ರೀಧರ ಪಡ್ವೆಟ್ನಾಯ, ರೊ. ರಂಜಿತ್ ಸಿಂಗ್ ಗುಲಾಟಿ, ಮಾಜಿ ಅಧ್ಯಕ್ಷರು, ರೋಟರಿ ಬೆಂಗಳೂರು ಇಂದಿರಾನಗರ, ಡಾ. ಎನ್. ಕೃಷ್ಣನ್ ಮೆನನ್, ಮಾಜಿ ಅಧ್ಯಕ್ಷ ರೋಟರಿ ಬೆಂಗಳೂರು ಇಂದಿರಾನಗರ, ರೊ. ಜಗದೀಶ್ ಎಂ., ನಿಕಟಪೂರ್ವ ಅಧ್ಯಕ್ಷ ರೋಟರಿ ಬೆಂಗಳೂರು, ಇಂದಿರಾನಗರ, ರೊ. ಯಶವಂತ್ ಪಟವರ್ಧನ್, ವಲಯ ಸೇನಾನಿ, ರೊ. ಡಾ. ಜಯ ಕುಮಾರ್ ಶೆಟ್ಟಿ, ಜಿಲ್ಲೆ. ಅಧ್ಯಕ್ಷರು, ಮೂಲ ಶಿಕ್ಷಣ ಮತ್ತು ಸಾಕ್ಷರತೆ, ರೊ. ಡಿ.ಎಂ.ಗೌಡ, ಕಾಯ೯ಕ್ರಮ ಸಂಯೋಜಕರು ರೋಟರಿ ಕ್ಲಬ್ ಬೆಳ್ತಂಗಡಿ, ರೊ. ಎನ್.ಬಾಲಕೃಷ್ಣನ್ ಅಧ್ಯಕ್ಷರು, ರೋಟರಿ ಬೆಂಗಳೂರು ಇಂದಿರಾನಗರ, ರೊ.ಎನ್. ಗೋಪಿನಾಥ್ ಕಾರ್ಯದರ್ಶಿ, ರೋಟರಿ ಬೆಂಗಳೂರು ಇಂದಿರಾನಗರ , ರೊ.ಮೇಜನರಲ್ (ನಿವೃತ್ತ) ಎಂ.ವಿ ಭಟ್, ಆನ್ಸ್ ಕ್ಲಬ್ ಅಧ್ಯಕ್ಷೆ ಅನಿತಾ ದಯಾಕರ್, ಬೆಳ್ತಂಗಡಿ ಪ.ಪೂ.ಕಾಲೇಜಿನ ಪ್ರಾಚಾರ್ಯ ಸುಕುಮಾರ್ ಉಪಸ್ಥಿತರಿದ್ದರು.


ರೊ. ಅನಂತ ಭಟ್ ಮಚ್ಚಿಮಲೆ ಅಧ್ಯಕ್ಷರು, ರೋಟರಿ ಕ್ಲಬ್ ಬೆಳ್ತಂಗಡಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ರೊ. ಧನಂಜಯ ರಾವ್ ಬಿ.ಕೆ ಕಾರ್ಯಕ್ರಮ ನಿರೂಪಿಸಿದರು. ರೊ.ವಿದ್ಯಾ ಕುಮಾರ್ ಕಾಂಚೋಡು ಕಾರ್ಯದರ್ಶಿ, ರೋಟರಿ ಕ್ಲಬ್ ಬೆಳ್ತಂಗಡಿ ಧನ್ಯವಾದವಿತ್ತರು.

Related posts

ಎಸ್ ಡಿ ಯಂ ಪಾಲಿಟೆಕ್ನಿಕ್ – ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಮುಂಡಾಜೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯ ಕ್ರಮ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

Suddi Udaya

ಬೆಳ್ತಂಗಡಿ ತಾಲೂಕಿನ ಕಲಾವಿದರೇ ನಟಿಸಿ- ನಿರ್ಮಾಣ ಮಾಡಿರುವ ಧರ್ಮಸ್ಥಳ ಕಾತ್ಯಾಯಣಿ ಕ್ರಿಯೆಷನ್‌ನವರ “ತೀರ್ಪು” ಟೆಲಿಫಿಲ್ಮ್ ಯೂಟ್ಯೂಬ್ ನಲ್ಲಿ ಬಿಡುಗಡೆ

Suddi Udaya

ಮಳೆಯ ರಭಸಕ್ಕೆ ಕಣಿಯಾಗಿ ಮಾರ್ಪಾಡುಗೊಂಡ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಕಾಲುದಾರಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಈ ಕಾಲುದಾರಿಯ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!