38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ರಾ.ಸೇ ಯೋಜನೆಯ ವಿಶೇಷ ಕಾರ್ಯಾಗಾರ ಉದ್ಘಾಟನೆ

ಉಜಿರೆ : ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಭಾಗವಹಿಸುವ ಅವಕಾಶ ಪಡೆಯುವುದು ಮಾತ್ರವಲ್ಲ ನಾವು ಅದರಲ್ಲಿ ಹೇಗೆ ತೊಡಗಿಸಿಕೊಂಡಿದ್ದೇನೆ , ನನ್ನ ವ್ಯಕ್ತಿತ್ವಕ್ಕೆ ಯಾವ ವಿಷಯಗಳನ್ನು ಪಡೆದುಕೊಂಡಿದ್ದೇವೆ ಎನ್ನುವುದು ಮುಖ್ಯ. ಹೊಂದಾಣಿಕೆಯ ಜೀವನ , ಪರಸ್ಪರ ತಿಳುವಳಿಕೆ ಇತ್ಯಾದಿಗಳಿಗೆ ರಾ.ಸೇ ಯೋಜನೆಯ ಶಿಬಿರಗಳು ಪೂರಕ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಅವರು ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ನಡೆದ ಒಂದು ದಿನದ ವಿಶೇಷ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಆನಂತರ ನಡೆದ ಕಾರ್ಯಾಗಾರದಲ್ಲಿ ಹಿರಿಯ ಸ್ವಯಂ ಸೇವಕರಾದ ಧನುಷ್ ಕೆ.ಪಿ , ಶಶಿಕಿರಣ್ ಹಾಗೂ ಉಜಿರೆ ಶ್ರೀ ಧ.ಮಂ ಪದವಿ ಕಾಲೇಜಿನ ರಾ.ಸೇ ಯೋಜನೆಯ ಸ್ವಯಂ ಸೇವಕರಾದ ನಿಸರ್ಗ ಹಾಗೂ ಯಕ್ಷಿತ್ ಅವರು ವರದಿ ತಯಾರಿಕೆ, ಸಿಂಚನಾ ಅವರು ಕಾರ್ಯಕ್ರಮ ನಿರ್ವಹಣೆ ಬಗ್ಗೆ, ಅನಂತ್ ಅವರು ಭಿತ್ತಿಪತ್ರಿಕೆ ಬಗ್ಗೆ ಮಾಹಿತಿ ನೀಡಿದರು. ಭೂಮಿಕಾ ಹಾಗೂ ಅನೇಕ ಹಿರಿಯ ಸ್ವಯಂ ಸೇವಕರು ಸಹಕಾರ ನೀಡಿದರು.

ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್, ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್, ಘಟಕದ ನಾಯಕರಾದ ಸುದರ್ಶನ ನಾಯಕ್ ಹಾಗೂ ದಕ್ಷಾ ಉಪಸ್ಥಿತರಿದ್ದರು.

ಸ್ವಯಂ ಸೇವಕ ಆದಿತ್ಯ ನಿರೂಪಿಸಿ , ವಂದಿಸಿದರು.

Related posts

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

Suddi Udaya

ಸುಲ್ಕೇರಿಮೊಗ್ರು: ಬಾಣಂತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಶ್ನಾ ಚಿಂತನೆ

Suddi Udaya

ಯು.ಎಸ್ ಖಾಲಿದ್ ಉಜಿರೆ ರವರ ನಿಧನಕ್ಕೆ ಎಸ್‌ಡಿಪಿಐ ಉಜಿರೆ ಬ್ಲಾಕ್ ಸಮಿತಿಯಿಂದ ಸಂತಾಪ

Suddi Udaya

ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!