22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ಜಮಾಬಂದಿ: ವಿವಿಧ ಯೋಜನೆಗಳಲ್ಲಿ ಶೇ 98.07 – 15ನೇ ಹಣಕಾಸು ಯೋಜನೆಯಲ್ಲಿ ಶೇ 67.14 ಪ್ರಗತಿ

ಬೆಳ್ತಂಗಡಿ: ದ.ಕ.ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ ಇದರ 2022-23 ನೇ ಸಾಲಿನ ವಾರ್ಷಿಕ ಜಮಾಬಂದಿ ಕಾರ್ಯಕ್ರಮ ಸೆ.30 ರಂದು ನೋಡೆಲ್ ಅಧಿಕಾರಿ ದ.ಕ ಜಿಲ್ಲಾ ಪಂಚಾಯತದ ಮುಖ್ಯ ಯೋಜನಾಧಿಕಾರಿ ಸಂಧ್ಯಾ ಕೆ.ಎಸ್ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರಗಿತು.


ಸಭೆಯಲ್ಲಿ ಕಳೆದ ಮಾರ್ಚ್-2023ರವರೆಗಿನ ತಾಲೂಕು ಪಂಚಾಯತಿ ಬೆಳ್ತಂಗಡಿಯ ವಿವಿಧ ಯೋಜನೆಗಳ ಪ್ರಗತಿ ವರದಿ ಹಾಗೂ ತಾಲೂಕು ಪಂಚಾಯತಿಯ 15ನೇ ಹಣಕಾಸು ಯೋಜನೆಯ ಪ್ರಗತಿ ವರದಿ ಬಗ್ಗೆ ನೋಡೆಲ್ ಅಧಿಕಾರಿಯವರು ಪರಿಶೀಲನೆ ನಡೆಸಿದರು. ವಿವಿಧ ಯೋಜನೆಗಳಲ್ಲಿ ಶೇ 98.07 ಸಾಧನೆ ಹಾಗೂ 15ನೇ ಹಣಕಾಸು ಯೋಜನೆಯಲ್ಲಿ ಶೇ 97.14 ಪ್ರಗತಿ ಸಾಧಿಸಲಾಗಿದೆ ಎಂದು ಸಭೆಗೆ ತಿಳಿಸಲಾಯಿತು.


ವೇದಿಕೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಬಿ.ಕುಸುಮಾಧರ, ಸಹಾಯಕ ಕಾರ್ಯಪಾಲ ಅಭಿಯಂತರ ನಿತಿನ್ ಉಪಸ್ಥಿತರಿದ್ದರು.


ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲೂಕು ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು, ತಾಲೂಕು ಪಂಚಾಯತ್ ಲೆಕ್ಕ ಸಹಾಯಕ ಗಣೇಶ್ ಪೂಜಾರಿ ಸ್ವಾಗತಿಸಿದರು. ತಾ.ಪಂ ವ್ಯವಸ್ಥಾಪಕ ಪ್ರಶಾಂತ್ ಡಿ., ಕಚೇರಿಯ ಅಶೋಕ ದೇವಾಡಿಗ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಜ.21- 25: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾದ್ವಾರದ ಉದ್ಘಾಟನೆ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಸರಳ ಮೋಟಾರ್ಸ್ ಮಾಲಕ ಎಂ.ಕೆ. ರತ್ನಾಕರ್ ನಿಧನ

Suddi Udaya

ಅರಸಿನಮಕ್ಕಿ ಶ್ರೀ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ವೇದವರ್ಧನ ಸ್ವಾಮೀಜಿಯವರು ಭೇಟಿ, ನಾಗರಿಕರಿಂದ ಗೌರವಾರ್ಪಣೆ

Suddi Udaya

ಏ.12: ನೂರಾಳ್ ಬೆಟ್ಟು ಶ್ರೀ ಮಹಾಗಣಪತಿ ದೇವರ ಮೂರ್ತಿ ಪ್ರತಿಷ್ಠೆ ಕಲಶಾಭಿಷೇಕ – ಆಶ್ಲೇಷ ಪೂಜೆ

Suddi Udaya

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya
error: Content is protected !!