September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ ಉದ್ಘಾಟನೆ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿ ಇಲ್ಲಿನ ವಾಣಿಜ್ಯ ಸಂಘವನ್ನು ಮಂಗಳೂರಿನ ಎಂ. ಆರ್. ಪಿ. ಎಲ್. ಸಂಸ್ಥೆಯ ಆಂತರಿಕ ಲೆಕ್ಕಪರಿಶೋಧಕರಾದ ಸಿ.ಎ. ಸನತ್ ಕುಮಾರ್ ನಾಯಕ್ ಇವರು ಸೆ.30 ರಂದು ಉದ್ಘಾಟಿಸಿದರು.

ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ನಿಮ್ಮ ಪದವಿ ಶಿಕ್ಷಣದ ಜೊತೆಗೆ ವೃತ್ತಿಪರ ಹಾಗೂ ತಾಂತ್ರಿಕ ಪರಿಣಿತಿಯನ್ನು ಹೊಂದಿದಾಗ ಮಾತ್ರ ಜಾಗತಿಕ ಮಾರುಕಟ್ಟೆಯಲ್ಲಿ ಉತ್ತಮ ಉದ್ಯೋಗವನ್ನು ಪಡೆಯಲು ಸಾಧ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ವಾಣಿಜ್ಯ ಸಂಘದ ಪದಾಧಿಕಾರಿಗಳನ್ನು ಸಿಎ ಸನತ್ ಕುಮಾರ್ ಇವರು ಪುಷ್ಪಗುಚ್ಛವನ್ನು ನೀಡಿ ಅಭಿನಂದಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರಾಘವ ಎನ್ ಇವರು ವಹಿಸಿ ವಿದ್ಯಾರ್ಥಿಗಳು ನಾಜೂಕು ಮತ್ತು ನೈಪುಣ್ಯತೆಯನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ವಿದ್ಯಾರ್ಥಿ ಕ್ಷೇಮಪಾನಾಧಿಕಾರಿ ಡಾ. ಸುಬ್ರಹ್ಮಣ್ಯ ಕೆ. ಇವರು ಮಾತನಾಡಿ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಗಳನ್ನು ಪ್ರಚುರಪಡಿಸಲು ಹಾಗೂ ವ್ಯಕ್ತಿತ್ವ ಬೆಳವಣಿಗೆಗೆ ವಾಣಿಜ್ಯ ಬಳಗವು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು . ವಾಣಿಜ್ಯ ಸಂಘದ ಸಂಚಾಲಕರಾದ ಪ್ರೊಫೆಸರ್ ಪದ್ಮನಾಭ ಕೆ ಇವರು ವಾಣಿಜ್ಯ ಸಂಘದ ಪ್ರಾಮುಖ್ಯತೆ ತಿಳಿಸಿ ಅತಿಥಿಗಳನ್ನು ಸ್ವಾಗತಿಸಿದರು.

ವೇದಿಕೆಯಲ್ಲಿ ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ ಎನ್ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ಪ್ರೊಫೆಸರ್ ಸುರೇಶ್ ವಿ ಇವರು ಅತಿಥಿಗಳನ್ನು ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು. ಪ್ರೊಫೆಸರ್ ನವೀನ್ ಕುಮಾರ್ ಹಾಗೂ ಪ್ರೊಫೆಸರ್ ರಾಜೇಶ್ವರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ದ್ವಿತೀಯ ಬಿಕಾಂನ ನಿವೇದಿತಾ ಮತ್ತು ತಂಡ ಪ್ರಾರ್ಥನೆ ಗೈದರು. ಪ್ರಥಮ ಬಿಕಾಂ ವಿದ್ಯಾರ್ಥಿನಿ ಕುಮಾರಿ ಶರಣ್ಯ ವಂದಿಸಿದರು. ತೃತೀಯ ಬಿಕಾಂನ ಅಪೇಕ್ಷ ಅತಿಥಿಗಳ ಪರಿಚಯ ನೀಡಿದರು. ಅಂತಿಮ ಬಿಕಾಂನ ಸಂಜನಾ ಮತ್ತು ದ್ವಿತೀಯ ಬಿಕಾಂನ ರಹೀನ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಕಾಶೋತ್ಸವ

Suddi Udaya

ಕರೆಮಾಡಿದ ತಕ್ಷಣ ರೈತರ ಮನೆಬಾಗಿಲಿಗೆ ಬರಲಿದೆ ಪಶು ಸಂಜೀವಿನಿ

Suddi Udaya

ಮಾವು ಮತ್ತು ಹಲಸು ಮೇಳಕ್ಕೆ ಅರ್ಜಿ ಆಹ್ವಾನ

Suddi Udaya

ಕರಾಯ: ಚರಂಡಿಗೆ ಬಿದ್ದ ಖಾಸಗಿ ಬಸ್

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya

ಸೌತಡ್ಕ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ಯವರಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!