22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ ಉದ್ಘಾಟನೆ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿ ಇಲ್ಲಿನ ವಾಣಿಜ್ಯ ಸಂಘವನ್ನು ಮಂಗಳೂರಿನ ಎಂ. ಆರ್. ಪಿ. ಎಲ್. ಸಂಸ್ಥೆಯ ಆಂತರಿಕ ಲೆಕ್ಕಪರಿಶೋಧಕರಾದ ಸಿ.ಎ. ಸನತ್ ಕುಮಾರ್ ನಾಯಕ್ ಇವರು ಸೆ.30 ರಂದು ಉದ್ಘಾಟಿಸಿದರು.

ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ನಿಮ್ಮ ಪದವಿ ಶಿಕ್ಷಣದ ಜೊತೆಗೆ ವೃತ್ತಿಪರ ಹಾಗೂ ತಾಂತ್ರಿಕ ಪರಿಣಿತಿಯನ್ನು ಹೊಂದಿದಾಗ ಮಾತ್ರ ಜಾಗತಿಕ ಮಾರುಕಟ್ಟೆಯಲ್ಲಿ ಉತ್ತಮ ಉದ್ಯೋಗವನ್ನು ಪಡೆಯಲು ಸಾಧ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ವಾಣಿಜ್ಯ ಸಂಘದ ಪದಾಧಿಕಾರಿಗಳನ್ನು ಸಿಎ ಸನತ್ ಕುಮಾರ್ ಇವರು ಪುಷ್ಪಗುಚ್ಛವನ್ನು ನೀಡಿ ಅಭಿನಂದಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರಾಘವ ಎನ್ ಇವರು ವಹಿಸಿ ವಿದ್ಯಾರ್ಥಿಗಳು ನಾಜೂಕು ಮತ್ತು ನೈಪುಣ್ಯತೆಯನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ವಿದ್ಯಾರ್ಥಿ ಕ್ಷೇಮಪಾನಾಧಿಕಾರಿ ಡಾ. ಸುಬ್ರಹ್ಮಣ್ಯ ಕೆ. ಇವರು ಮಾತನಾಡಿ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಗಳನ್ನು ಪ್ರಚುರಪಡಿಸಲು ಹಾಗೂ ವ್ಯಕ್ತಿತ್ವ ಬೆಳವಣಿಗೆಗೆ ವಾಣಿಜ್ಯ ಬಳಗವು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು . ವಾಣಿಜ್ಯ ಸಂಘದ ಸಂಚಾಲಕರಾದ ಪ್ರೊಫೆಸರ್ ಪದ್ಮನಾಭ ಕೆ ಇವರು ವಾಣಿಜ್ಯ ಸಂಘದ ಪ್ರಾಮುಖ್ಯತೆ ತಿಳಿಸಿ ಅತಿಥಿಗಳನ್ನು ಸ್ವಾಗತಿಸಿದರು.

ವೇದಿಕೆಯಲ್ಲಿ ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ ಎನ್ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ಪ್ರೊಫೆಸರ್ ಸುರೇಶ್ ವಿ ಇವರು ಅತಿಥಿಗಳನ್ನು ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು. ಪ್ರೊಫೆಸರ್ ನವೀನ್ ಕುಮಾರ್ ಹಾಗೂ ಪ್ರೊಫೆಸರ್ ರಾಜೇಶ್ವರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ದ್ವಿತೀಯ ಬಿಕಾಂನ ನಿವೇದಿತಾ ಮತ್ತು ತಂಡ ಪ್ರಾರ್ಥನೆ ಗೈದರು. ಪ್ರಥಮ ಬಿಕಾಂ ವಿದ್ಯಾರ್ಥಿನಿ ಕುಮಾರಿ ಶರಣ್ಯ ವಂದಿಸಿದರು. ತೃತೀಯ ಬಿಕಾಂನ ಅಪೇಕ್ಷ ಅತಿಥಿಗಳ ಪರಿಚಯ ನೀಡಿದರು. ಅಂತಿಮ ಬಿಕಾಂನ ಸಂಜನಾ ಮತ್ತು ದ್ವಿತೀಯ ಬಿಕಾಂನ ರಹೀನ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

Suddi Udaya

ಬೆಳ್ತಂಗಡಿ: ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಶ್ರೀಮತಿ ಇಂದಿರಾ ಗಾಂಧಿ ಜನ್ಮದಿನಾಚರಣೆ

Suddi Udaya

ಚಾರ್ಮಾಡಿ ಘಾಟಿ: ಮರ ಧಾರಾಶಾಹಿ-ಸಂಚಾರ ಸ್ಥಗಿತ

Suddi Udaya

ಇಂದಬೆಟ್ಟು: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ಧ್ವಜಾರೋಹಣ

Suddi Udaya
error: Content is protected !!