22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಸೇವಾ ಟ್ರಸ್ಟ್ ಇದರ ವತಿಯಿಂದ ತಾಲೂಕಿನ ಬಡಕುಟುಂಬದ ಪ್ರತಿಭಾನ್ವಿತ 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

ಬೆಳ್ತಂಗಡಿ : ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಸೇವಾ ಟ್ರಸ್ಟ್ ಇದರ ವತಿಯಿಂದ ತಾಲೂಕಿನ ಪ್ರತಿಭಾನ್ವಿತ 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಸೆ.30 ರಂದು ರೋಟರಿ ಸೇವಾ ಭವನ, ಅರಳಿ ರಸ್ತೆ, ಕಾಶಿಬೆಟ್ಟುವಿನಲ್ಲಿ ಜರುಗಿತು.


ಮುಖ್ಯ ಅತಿಥಿಗಳಾಗಿ ರೊ. ಕೃಷ್ಣ ಶೆಟ್ಟಿ ಕೆ., ಪಿಡಿಜಿ ಮತ್ತು ಜಿಲ್ಲಾ ಸಲಹೆಗಾರ, ARRFC, ವಿಧಾನ ಪರಿಷತ್ ಶಾಸಕ ರೊ. ಕೆ.ಪ್ರತಾಪಸಿಂಹ ನಾಯಕ್, ಪಡ್ವೆಟ್ನಾಯ ಫ್ಯಾಮಿಲಿ ಟ್ರಸ್ಟ್ ಉಜಿರೆ ಟ್ರಸ್ಟಿ, ಶ್ರೀಧರ ಪಡ್ವೆಟ್ನಾಯ, ರೊ. ರಂಜಿತ್ ಸಿಂಗ್ ಗುಲಾಟಿ, ಮಾಜಿ ಅಧ್ಯಕ್ಷರು, ರೋಟರಿ ಬೆಂಗಳೂರು ಇಂದಿರಾನಗರ, ಡಾ. ಎನ್. ಕೃಷ್ಣನ್ ಮೆನನ್, ಮಾಜಿ ಅಧ್ಯಕ್ಷ ರೋಟರಿ ಬೆಂಗಳೂರು ಇಂದಿರಾನಗರ, ರೊ. ಜಗದೀಶ್ ಎಂ., ನಿಕಟಪೂರ್ವ ಅಧ್ಯಕ್ಷ ರೋಟರಿ ಬೆಂಗಳೂರು, ಇಂದಿರಾನಗರ, ರೊ. ಯಶವಂತ್ ಪಟವರ್ಧನ್, ವಲಯ ಸೇನಾನಿ, ರೊ. ಡಾ. ಜಯ ಕುಮಾರ್ ಶೆಟ್ಟಿ, ಜಿಲ್ಲೆ. ಅಧ್ಯಕ್ಷರು, ಮೂಲ ಶಿಕ್ಷಣ ಮತ್ತು ಸಾಕ್ಷರತೆ, ರೊ. ಡಿ.ಎಂ.ಗೌಡ, ಕಾಯ೯ಕ್ರಮ ಸಂಯೋಜಕರು ರೋಟರಿ ಕ್ಲಬ್ ಬೆಳ್ತಂಗಡಿ, ರೊ. ಎನ್.ಬಾಲಕೃಷ್ಣನ್ ಅಧ್ಯಕ್ಷರು, ರೋಟರಿ ಬೆಂಗಳೂರು ಇಂದಿರಾನಗರ, ರೊ.ಎನ್. ಗೋಪಿನಾಥ್ ಕಾರ್ಯದರ್ಶಿ, ರೋಟರಿ ಬೆಂಗಳೂರು ಇಂದಿರಾನಗರ , ರೊ.ಮೇಜನರಲ್ (ನಿವೃತ್ತ) ಎಂ.ವಿ ಭಟ್, ಆನ್ಸ್ ಕ್ಲಬ್ ಅಧ್ಯಕ್ಷೆ ಅನಿತಾ ದಯಾಕರ್, ಬೆಳ್ತಂಗಡಿ ಪ.ಪೂ.ಕಾಲೇಜಿನ ಪ್ರಾಚಾರ್ಯ ಸುಕುಮಾರ್ ಉಪಸ್ಥಿತರಿದ್ದರು.


ರೊ. ಅನಂತ ಭಟ್ ಮಚ್ಚಿಮಲೆ ಅಧ್ಯಕ್ಷರು, ರೋಟರಿ ಕ್ಲಬ್ ಬೆಳ್ತಂಗಡಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ರೊ. ಧನಂಜಯ ರಾವ್ ಬಿ.ಕೆ ಕಾರ್ಯಕ್ರಮ ನಿರೂಪಿಸಿದರು. ರೊ.ವಿದ್ಯಾ ಕುಮಾರ್ ಕಾಂಚೋಡು ಕಾರ್ಯದರ್ಶಿ, ರೋಟರಿ ಕ್ಲಬ್ ಬೆಳ್ತಂಗಡಿ ಧನ್ಯವಾದವಿತ್ತರು.

Related posts

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದರು ಇನ್ನೂ ಪತ್ತೆಯಾಗದ ಕಳೇಬರ ಕಾರ್ಯಾಚರಣೆಗೆ ಶ್ವಾನ ದಳ ಎಂಟ್ರಿ

Suddi Udaya

ಸುದ್ದಿ ಉದಯ ಫಲಶ್ರುತಿ: ನಿಡ್ಲೆ ಕಂರ್ಬಿತ್ತಿಲು ಎಂಬಲ್ಲಿ ಅಪಾಯದಂಚಿನಲ್ಲಿದ್ದ ಬೃಹತ್ ಗಾತ್ರದ ಮರ ತೆರವು

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ರಜತ ಮಹೋತ್ಸವ ಸಂಭ್ರಮ

Suddi Udaya

ಅಳದಂಗಡಿಯಲ್ಲೊಂದು ಅಪರೂಪದ ಕಾರ್ಯಕ್ರಮ: ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿ ಹಾಗೂ 20 ಮಂದಿ ಮೆಸ್ಕಾಂ ಸಿಬ್ಬಂದಿಗಳಿಗೆ ಸನ್ಮಾನ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!